Categories: ಮಂಗಳೂರು

ಮಂಗಳೂರು: ಕೈಗಾರಿಕಾ ಸುರಕ್ಷತೆಯಲ್ಲಿ ಎಂಆರ್‌ಪಿಎಲ್‌ ಸಂಸ್ಥೆಗೆ ಮೊದಲ ಬಹುಮಾನ

ಮಂಗಳೂರು: ಅತ್ಯುತ್ತಮ ಕೈಗಾರಿಕಾ ಸುರಕ್ಷತಾ ನಿರ್ವಹಣೆಗಾಗಿ ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಸಂಸ್ಥೆಯ ಅರೋಮ್ಯಾಟಿಕ್ಸ್ ಘಟಕವು ಮೊದಲ ಬಹುಮಾನ ಪಡೆದಿದೆ. ತೈಲ ಉದ್ಯಮಗಳಲ್ಲಿ ಸುರಕ್ಷತಾ ನಿಯಮಗಳ ಅನುಸರಣೆಗಾಗಿ 2023ನೇ ಸಾಲಿನ ಪ್ರಶಸ್ತಿ ದೊರೆತಿದೆ.

ಅತ್ಯುತ್ತಮ ಸುರಕ್ಷತಾ ನಿರ್ವಹಣೆಗಾಗಿ ಬಹುಮಾನ ನೀಡಲಾಗಿದೆ. ವಿಪತ್ತು ತಗ್ಗಿಸುವಿಕೆ ಮತ್ತು ತುರ್ತು ಪರಿಸ್ಥಿತಿ ನಿರ್ವಹಣೆಯ ಅತ್ಯುತ್ತಮ ಸಾಧನೆ ಗುರುತಿಸಿ ಪ್ರಶಸ್ತಿ ನೀಡಲಾಗಿದೆ.

ರಾಷ್ಟ್ರೀಯ ಸುರಕ್ಷತಾ ದಿನದ ಅಂಗವಾಗಿ ಮಾ.4ರಂದು ಹಿಂದುಸ್ತಾನ್‌ ಏರೋನಾಟಿಕ್ಸ್‌ ಸಂಸ್ಥೆ ಆವರಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ರಾಜ್ಯ ಕಾರ್ಖಾನೆಗಳು, ಬಾಯ್ಲರ್‌, ಕೈಗಾರಿಕಾ ಸುರಕ್ಷತಾ ಇಲಾಖೆ ವತಿಯಿಂದ ಪ್ರಶಸ್ತಿ ನೀಡಲಾಗಿದೆ.

ಸಮಾರಂಭದಲ್ಲಿ ಎಂಆರ್‌ಪಿಎಲ್‌ ಸಂಸ್ಥೆ ಇಡಿ (ರಿಫೈನರಿ) ಮುಂಡ್ಕೂರು ಶ್ಯಾಮಪ್ರಸಾದ್ ಕಾಮತ್, ಜಿಜಿಎಂ ( ಮಾರ್ಕೆಟಿಂಗ್, ಯೋಜನೆ) ಬಿ ಸುದರ್ಶನ್, ಸಹಾಯಕ ಮ್ಯಾನೇಜರ್ ( ಎಚ್‌ಎಸ್‌ಇ ಮತ್ತು ಎಎಂಪಿ, ಎಸ್‌) ಕುನಾಲ್ ಸಿಂಗ್ ಸಿಕರ್ವಾರ್, ಎಂಆರ್‌ ಪಿಎಲ್‌ ಸಹಾಯಕ ವ್ಯವಸ್ಥಾಪಕ ಯೋಗೇಂದ್ರ ಬಾಬು ಪ್ರಶಸ್ತಿ ಸ್ವೀಕರಿಸಿದರು. ಸಿಂಜಿನ್‌ ಇಂಟರ್‌ನ್ಯಾಷನಲ್‌ ಸಂಸ್ಥೆಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಮಹೇಶ್ ಭಾಲ್ಗಟ್ ಪ್ರಶಸ್ತಿ ಪ್ರದಾನ ಮಾಡಿದರು.

ಕಾರ್ಖಾನೆ, ಬಾಯ್ಲರ್‌, ಕೈಗಾರಿಕಾ ಸುರಕ್ಷತೆ ಇಲಾಖೆ ನಿರ್ದೇಶಕ ಮತ್ತು ರಾಜ್ಯ ಸುರಕ್ಷತಾ ಸಂಸ್ಥೆ ಕೆ.ಶ್ರೀನಿವಾಸ್ ಕಾರ್ಯದರ್ಶಿ ಕೆ.ಶ್ರೀನಿವಾಸ್ ಉಪಸ್ಥಿತರಿದ್ದರು.

Ashika S

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

2 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

2 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

3 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

3 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

3 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

3 hours ago