News Karnataka Kannada
Thursday, May 02 2024
ಮಂಗಳೂರು

ಮಂಗಳೂರು: ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಮುಲೈ ಮುಹಿಲನ್

Bars to remain closed for four days in Dakshina Kannada district from September 6 to 9
Photo Credit : News Kannada

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದ ಬೆನ್ನಲ್ಲೇ ನೂತನ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಇಂದು ಅಧಿಕಾರ ಸ್ವೀಕರಿಸಿದರು. ನಿರ್ಗಮನ ಡಿಸಿ ರವಿಕುಮಾರ್ ಅವರು ಅಧಿಕಾರ ಹಸ್ತಾಂತರ ಮಾಡಿದರು.

ಬೆಂಗಳೂರು ಸ್ಮಾರ್ಟ್ ಗವರ್ನೆನ್ಸ್ ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದ ಮುಲೈ ಮುಹಿಲನ್ ಅವರು ತಮಿಳುನಾಡು ಮೂಲದವರಾಗಿದ್ದು, ದಿಂಡಿಗಲ್ ಅಣ್ಣಾ ವಿಶ್ವವಿದ್ಯಾಲಯದ ಪಿಎಸ್‌ಎನ್‌ಎ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿಯಲ್ಲಿ ಓದಿ ಕಂಪ್ಯೂಟರ್ ವಿಷಯದಲ್ಲಿ ಪದವಿ ಪಡೆದಿದ್ದಾರೆ.

1986ರಲ್ಲಿ ಜನಿಸಿದ ಅವರು 2013ರ ಬ್ಯಾಚ್ ಐಎಎಸ್ ಅಧಿಕಾರಿಯಾಗಿದ್ದಾರೆ.  ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ ಅವರನ್ನೂ ಕೂಡಾ ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು