News Karnataka Kannada
Sunday, May 12 2024
ಮಂಗಳೂರು

ಮಂಗಳೂರು: ಅಣಬೆ ಫ್ಯಾಕ್ಟರಿ ಬಂದ್‌ ಮಾಡುವಂತೆ ಆದೇಶ

Mushroom factory to be shut down
Photo Credit : News Kannada

ಮಂಗಳೂರು: ಮಂಗಳೂರು ನಗರದ ಹೊರವಲಯದ ಆಶ್ರಯ ನಗರದ ಬಳಿ ಕಾರ್ಯಾಚರಿಸುತ್ತಿರುವ ಅಣಬೆ ಫ್ಯಾಕ್ಟರಿಯನ್ನು ತಕ್ಷಣ ಬಂದ್‌ ಮಾಡುವಂತೆ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ಭಾನುವಾರ ವಾಮಂಜೂರಿನ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಅವರು ಜನರ ಅಹವಾಲು ಆಲಿಸಿದರು.

ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಸ್ಥಳೀಯ ಜನರಿಗೆ ದುರ್ವಾಸನೆಯಿಂದ ಜನರಿಗೆ ಬದುಕಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಶ್ವಾಸಕೋಶ ನೋವು, ತಲೆನೋವು, ವಾಂತಿ ಸೇರಿದಂತೆ ಹಲವು ಸಮಸ್ಯೆಗಳನ್ನು ಜನರು ಎದುರಿಸುವಂತಾಗಿದೆ. ಜಿಲ್ಲಾಧಿಕಾರಿಯವರು ಘಟಕ ಮುಚ್ಚುವ ಕುರಿತಂತೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮಾತನಾಡಿ, ಇಲ್ಲಿನ ಪರಿಸ್ಥಿತಿಯನ್ನು ಮನಗಂಡು ಸಾರ್ವಜನಿಕರಿಗೆ ಆಗುತ್ತಿರುವ ಅನಾನುಕೂಲವನ್ನು ಪರಿಗಣಿಸಿ ಘಟಕ ಮುಚ್ಚಲು ಆದೇಶಿಸುವುದಾಗಿ ಘೋಷಿಸಿದರು.ಮಂಗಳೂರು ನಗರದ ಹೊರವಲಯದ ಆಶ್ರಯ ನಗರದ ಬಳಿ ಕಾರ್ಯಾಚರಿಸುತ್ತಿರುವ ಅಣಬೆ ಫ್ಯಾಕ್ಟರಿಯನ್ನು ತಕ್ಷಣ ಬಂದ್‌ ಮಾಡುವಂತೆ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ಭಾನುವಾರ ವಾಮಂಜೂರಿನ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಅವರು ಜನರ ಅಹವಾಲು ಆಲಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು