News Karnataka Kannada
Sunday, April 28 2024
ಮಂಗಳೂರು

ಮಂಗಳೂರು: ಮುಸ್ಲಿಂ ಸೆಂಟ್ರಲ್ ಕಮಿಟಿ ವತಿಯಿಂದ ಎರಡು ಕುಟುಂಬಗಳಿಗೆ ಪರಿಹಾರ ಘೋಷಣೆ

Muslim Central Committee announces compensation for two families
Photo Credit : By Author
ಮಂಗಳೂರು: ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಮೂರು ಕೊಲೆಗಳ ಬಗ್ಗೆ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷರಾದ ಅಲ್ ಹಾಜ್ ಕೆ.ಎಸ್. ಮೊಹಮ್ಮದ್ ಮಸೂದ್ ರವರ ಅಧ್ಯಕ್ಷತೆಯಲ್ಲಿ ತುರ್ತು ಸಭೆ ನಡೆಯಿತು.
ಈ ಸಭೆಯಲ್ಲಿ ಸರ್ಕಾರದ ವಿಪಕ್ಷ ಉಪನಾಯಕರಾದ ಯು.ಟಿ. ಖಾದರ್ ಮಾಜಿ ಶಾಸಕರಾದ ಮೊಯಿದಿನ್ ಬಾವರವರು ಉಪಸ್ಥಿತರಿದ್ದರು.
ಸಭೆಯಲ್ಲಿ ಸರ್ವ ಸದಸ್ಯರ ಒಮ್ಮತದ ಅಭಿಪ್ರಾಯದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಮೂರು ಅಮಾಯಕರ ಕೊಲೆಯಲ್ಲಿ ಕೇವಲ ಪ್ರವೀಣ್ ಎಂಬ ಬಿಜೆಪಿ ಕಾರ್ಯಕರ್ತನ ಮನೆಗೆ ಮುಖ್ಯ ಮಂತ್ರಿ ಭೇಟಿ ನೀಡಿ 25 ಲಕ್ಷ ಪರಿಹಾರ ನೀಡಿದ್ದು ಉಳಿದ ಇಬ್ಬರು ಅಮಾಯಕ ಮುಸ್ಲಿಮರ ಮನೆಗೆ ಭೇಟಿಯನ್ನು ನೀಡದೆ ಮುಖ್ಯ ಮಂತ್ರಿಯವರ ಅಮಾನವೀಯ ನಿಲುವಿಗೆ ಬೇಸರ ವ್ಯಕ್ತಪಡಿಸಲಾಯಿತು.
ಆದುದರಿಂದ ಮುಸ್ಲಿಂ ಸಮುದಾಯದವರಿಗೆ ಮುಸ್ಲಿಂ ಸೆಂಟ್ರಲ್ ಕಮಿಟಿಯ ನೇತೃತ್ವದಲ್ಲಿ ದಾನಿಗಳಿಂದ ವಂತಿಗೆ ಸಂಗ್ರಹಿಸಿ ಮರಣ ಹೊಂದಿದ ಎರಡೂ ಕುಟುಂಬಕ್ಕೆ ತಲಾ 30 ಲಕ್ಷದಂತೆ ಸಹಾಯ ಧನ ನೀಡುವುದಾಗಿ ಸಭೆಯಲ್ಲಿ ನಿರ್ಣಯಿಸಲಾಯಿತು ಹಾಗೂ ಈ ಬಗ್ಗೆ ಕುಟುಂಬಸ್ಥರಿಗೆ ಕಾನೂನಿನ ವ್ಯವಸ್ಥೆ ಬೇಕಿದ್ದಲ್ಲಿ ಮಾಡಲು ನಿರ್ಣಯಿಸಲಾಯಿತು
ದಕ್ಷಿಣ ಕನ್ನಡ ಜಿಲ್ಲೆಯ ಸಮಸ್ತ ನಾಗರಿಕರು ಶಾಂತಿಯನ್ನು ಕಾಪಾಡಬೇಕು ಹಾಗೂ ಮರಣ ಹೊಂದಿದ ಮೂರು ಕುಟುಂಬಸ್ಥರಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ಪರಮಾತ್ಮನು ನೀಡಲೆಂದು ಅಧ್ಯಕ್ಷರಾದ ಅಲ್ ಹಾಜ್ ಕೆ.ಎಸ್. ಮೊಹಮ್ಮದ್ ಮಸೂದ್ ರವರು ಸಭೆಯಲ್ಲಿ ಸಾಂತ್ವಾನವನ್ನು ನೀಡಿದರು.
ಈ ಸಭೆಯಲ್ಲಿ ಉಪಾಧ್ಯಕ್ಷರುಗಳಾದ  ಹಾಜಿ ಇಬ್ರಾಹಿಂ ಕೋಡಿಜಾಲ್, ಹಾಜಿ ಬಿ.ಎಂ. ಮುಮ್ತಾಜ್ ಅಲಿ, ಕೆ.ಅಶ್ರಫ್, ಸೈಯದ್ ಅಹಮದ್ ಬಾಷ ತಂಙಳ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
photo credit: R Bhat
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
186

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು