ಮಂಗಳೂರು: ಕೆಂಪೇಗೌಡರ ಕಂಚಿನ ಪ್ರತಿಮೆ ನಿರ್ಮಾಣ ಹಾಗೂ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಅವರ ಹೆಸರಿಡಬೇಕೆಂಬ ಸಂದರ್ಭದಲ್ಲಿ ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡಬೇಕೆಂಬ ಚರ್ಚೆಗಳು ಕೇಳಿ ಬಂತು. ಆದರೆ ಕೆಂಪೇಗೌಡರ ಎದುರು ಯಾವ ಟಿಪ್ಪು ಏನೂ ಅಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದರು.
ನಗರದ ಲೇಡಿಹಿಲ್ ಬಳಿ ಮನಪಾ ಈಜುಕೊಳದ ಆವರಣದಲ್ಲಿ ಬೆಂಗಳೂರಿನಲ್ಲಿ ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕೆ ಮಣ್ಣು ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಟಿಪ್ಪುವಿನ ನಿರಂತರ ದಾಳಿಗಳ ಬಗ್ಗೆ ಮಂಗಳೂರು ಹಾಗೂ ಕೊಡಗುಗಳಲ್ಲಿ ಸ್ಪಷ್ಟ ಉಲ್ಲೇಖಗಳಿವೆ. ಆತನ ನೆತ್ತರಕೆರೆ ವಿಚಾರ, ಚರ್ಚ್ಗಳ ಮೇಲಿನ ದಾಳಿ, ಮತಾಂತರ ಪ್ರಕ್ರಿಯೆಗಳು ಚರ್ಚೆಯಲ್ಲಿದೆ. ಆದರೆ ಕೆಂಪೇಗೌಡರು, ಒಡೆಯರ್ಗಳ ವಿಚಾರದಲ್ಲಿ ಎಲ್ಲೂ ಚರ್ಚೆಗಳಿಲ್ಲ, ಸಂದೇಹಗಳಿಲ್ಲ. ಕೆಂಪೇಗೌಡರು ಸರ್ವ ಸಮಾಜ, ಸಮುದಾಯಗಳನ್ನು ಒಂದಾಗಿ ಬೆಂಗಳೂರನ್ನು ಕಟ್ಟಿದವರು. ಅಂತಹ ಶ್ರೇಷ್ಠ ಸಾಧಕರ ಸಾಧನೆಯ ಬಗ್ಗೆ ಶಾಶ್ವತವಾಗಿ ನೆನಪು ಮಾಡುವಂತಹ ಕಾರ್ಯವನ್ನು ಬಿಜೆಪಿ ಸರಕಾರ ಮಾಡಿದೆ ಎಂದರು.
ಕೆಂಪೇಗೌಡರು ಓರ್ವ ಸಾಧಕನಾಗಿ ಬೆಂಗಳೂರನ್ನು ಕಟ್ಟಿ ಬೆಳೆಸಿ ನಮ್ಮ ರಾಜ್ಯದ ಅಭಿವೃದ್ಧಿ ಪಥಕ್ಕೆ ಮುನ್ನುಡಿಯನ್ನು ಬರೆದದವರು. ಅವರ ಪರಿಚಯ ಮುಂದಿನ ಪೀಳಿಗೆಗೆ ಆಗಬೇಕು, ಸಮಾಜಕ್ಕೆ ಅವರು ನೀಡಿರುವ ಕೊಡುಗೆಗಳು ಶಾಶ್ವತವಾಗಿ ಉಳಿಯಬೇಕೆಂಬ ಉದ್ದೇಶದಿಂದ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಸರಕಾರ ಕೆಂಪೇಗೌಡ ಥೀಮ್ ಪಾರ್ಕ್ ಹಾಗೂ ಭವ್ಯ ಪ್ರತಿಮೆಯನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ನಳಿನ್ ಕುಮಾರ್ ಕಟೀಲು ಹೇಳಿದರು.
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…
ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ ಮಕ್ಕಳ ಮೇಲೆ ಬೀದಿ ನಾಯಿಗಳ ಗ್ಯಾಂಗ್ ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…
ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…
ಸ್ಯಾಂಡಲ್ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…