ಮಂಗಳೂರು: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾದ್ಯಕ್ಷರು ಹಾಗೂ ಲೋಕಸಭಾ ಸದಸ್ಯರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು, ಶಾಸಕರಾದ ಶ್ರೀ ವೇದವ್ಯಾಸ್ ಕಾಮತ್ ಹಾಗೂ ಡಾ.ವೈ ಭರತ್ ಶೆಟ್ಟಿ ಅವರೊಂದಿಗೆ ಕೂಳೂರು ಗೋಲ್ಡ್ ಫಿಂಚ್ ಸಿಟಿ ಮೈದಾನಕ್ಕೆ ಭೇಟಿ ನೀಡಿ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಿದರು.
ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರು, ಪಾಲಿಕೆ ಸದಸ್ಯರು ಹಾಗೂ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.