News Karnataka Kannada
Friday, May 03 2024
ಮಂಗಳೂರು

ಮಂಗಳೂರು: ಕಂಕನಾಡಿ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನಲ್ಲಿ ರಾಷ್ಟ್ರೀಯ ಗ್ರಂಥಾಲಯ ದಿನ ಕಾರ್ಯಕ್ರಮ

Kankanady
Photo Credit : News Kannada

ಮಂಗಳೂರು: ಕಂಕನಾಡಿ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಕೇಂದ್ರ ಗ್ರಂಥಾಲಯ ಸಮಿತಿ ವತಿಯಿಂದ ರಾಷ್ಟ್ರೀಯ ಗ್ರಂಥಾಲಯ ದಿನ ಕಾರ್ಯಕ್ರಮವನ್ನ ಡೆನ್ಸಿನಿಯಲ್ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ನಗರದ ಕಂಕನಾಡಿಯ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಡೆನ್ಸಿನಿಯಲ್ ಸಭಾಂಗಣದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಗ್ರಂಥಾಲಯ ದಿನ ಕಾರ್ಯಕ್ರಮವನ್ನ ಡಾ.ಎಂ. ವಿ.ಶೆಟ್ಟಿ ಮೆಮೋರಿಯಲ್ ಟ್ರಸ್ಟನ ಅಧ್ಯಕ್ಷೆ ಡಾ.ಹಿಮಾ ಊರ್ಮಿಳಾ ಶೆಟ್ಟಿ ಅವರು ದೀಪ ಬೆಳಗಿಸಿ, ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಪ್ರತಿಯೊಬ್ಬರು ಜ್ಞಾನವನ್ನ ವೃದ್ಧಿಸಲು ಪುಸ್ತಕ ಎಂಬ ಭಂಡಾರ ಅಗತ್ಯವಿದೆ.ಅದರೆ ಇತ್ತೀಚಿನ ಕಾಲದಲ್ಲಿ ಪುಸ್ತಕವನ್ನ ಓದುವಂತಹ ಅಭ್ಯಾಸ ಇಲ್ಲದ್ದಂತಾಗಿದೆ. ಸಾಮಾಜಿಕ ಜಾಲತಾಣಕ್ಕೆ ಹೊಂದಿಕೊಂಡು ಬದುಕುವ ಪರಿಸ್ಥಿತಿ ಬಂದೋದಗಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆ ನಿರ್ದೇಶಕ ರೇ.ಫಾದರ್ ರಿಚರ್ಡ್ ಎ.ಅಲೋಶಿಯಸ್ ವಹಿಸಿ, ಮಾತನಾಡಿದ ಅವರು, ನಮ್ಮ ಸಂಸ್ಥೆಯ ಗ್ರಂಥಾಲಯ ಅತ್ಯುತ್ತಮ ರೀತಿಯಲ್ಲಿ ನಿರ್ವಹಿಸಲು ಮಾಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಗ್ರಂಥಾಲಯದಲ್ಲಿ ಸಾಧಕರ ಪುಸ್ತಕಗಳಿದೆ, ಅದನ್ನ ಸದುಪಯೋಗ ಪಡೆದುಕೊಳ್ಳಬೇಕೆಂದರು.

ಈ ಸಂದರ್ಭ ಕ್ವಿಜ್ ಸ್ಪರ್ಧಾ ವಿಜೇತರಿಗೆ ಗಣ್ಯರು ಬಹುಮಾನ ನೀಡಿ,ಗೌರವಿಸಿದ್ರು. ಹೀಗೆ ವಿವಿಧ ಸ್ಪರ್ಧೆಯ ವಿಜೇತರಿಗೆ ಸ್ಮರಣಿಕೆ ನೀಡಿ, ಗೌರವಿಸಲಾಯಿತು.ಇದೇ ವೇಳೆ ಪದ್ಮಶ್ರೀ ದಿವಂಗತ ಡಾ. ಎಸ್.ಆರ್. ರಂಗನಾಥನ್ ಅವರ ಜನ್ಮದಿನ ಭಾವಚಿತ್ರ ಕ್ಕೆ ಗಣ್ಯರು ಪುಪ್ಪನಮನ ಸಲ್ಲಿಸಿದರು.

ಈ ವೇಳೆ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ರೇ.ಫಾದರ್ ಅಜಿತ್.ಬಿ.ಮೆನೇಜಸ್ , ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಡೀನ್ ಡಾ|ಆಂಟನಿ ಸಿಲ್ವನ್ ಡಿಸೋಜಾ, ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಗ್ರಂಥಪಾಲಕಿ ಡಾ.ಜಾನೆಟ್ ಡಾಟಿ ಲೋಬೋ ಮೊದಲಾದವರು ಉಪಸ್ಥಿತರಿದ್ದರು.

ಈ ವೇಳೆ ಗ್ರಂಥಾಲಯ ಸಮಿತಿ ಅಧ್ಯಕ್ಷರಾದ ಡಾ.ವೆಂಕಟೇಶ್ ಬಿ.ಎಂ ಅವರು ಸ್ವಾಗತಿಸಿದರು.ಪ್ರಾಧ್ಯಾಪಕರಾದ ಡಾ.ಜಾನ್ ಮಾರ್ಟಿಸ್ ಅವರು ವಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು