ಮಂಗಳೂರು: ಕಂಕನಾಡಿ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಕೇಂದ್ರ ಗ್ರಂಥಾಲಯ ಸಮಿತಿ ವತಿಯಿಂದ ರಾಷ್ಟ್ರೀಯ ಗ್ರಂಥಾಲಯ ದಿನ ಕಾರ್ಯಕ್ರಮವನ್ನ ಡೆನ್ಸಿನಿಯಲ್ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.
ನಗರದ ಕಂಕನಾಡಿಯ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಡೆನ್ಸಿನಿಯಲ್ ಸಭಾಂಗಣದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಗ್ರಂಥಾಲಯ ದಿನ ಕಾರ್ಯಕ್ರಮವನ್ನ ಡಾ.ಎಂ. ವಿ.ಶೆಟ್ಟಿ ಮೆಮೋರಿಯಲ್ ಟ್ರಸ್ಟನ ಅಧ್ಯಕ್ಷೆ ಡಾ.ಹಿಮಾ ಊರ್ಮಿಳಾ ಶೆಟ್ಟಿ ಅವರು ದೀಪ ಬೆಳಗಿಸಿ, ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಪ್ರತಿಯೊಬ್ಬರು ಜ್ಞಾನವನ್ನ ವೃದ್ಧಿಸಲು ಪುಸ್ತಕ ಎಂಬ ಭಂಡಾರ ಅಗತ್ಯವಿದೆ.ಅದರೆ ಇತ್ತೀಚಿನ ಕಾಲದಲ್ಲಿ ಪುಸ್ತಕವನ್ನ ಓದುವಂತಹ ಅಭ್ಯಾಸ ಇಲ್ಲದ್ದಂತಾಗಿದೆ. ಸಾಮಾಜಿಕ ಜಾಲತಾಣಕ್ಕೆ ಹೊಂದಿಕೊಂಡು ಬದುಕುವ ಪರಿಸ್ಥಿತಿ ಬಂದೋದಗಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆ ನಿರ್ದೇಶಕ ರೇ.ಫಾದರ್ ರಿಚರ್ಡ್ ಎ.ಅಲೋಶಿಯಸ್ ವಹಿಸಿ, ಮಾತನಾಡಿದ ಅವರು, ನಮ್ಮ ಸಂಸ್ಥೆಯ ಗ್ರಂಥಾಲಯ ಅತ್ಯುತ್ತಮ ರೀತಿಯಲ್ಲಿ ನಿರ್ವಹಿಸಲು ಮಾಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಗ್ರಂಥಾಲಯದಲ್ಲಿ ಸಾಧಕರ ಪುಸ್ತಕಗಳಿದೆ, ಅದನ್ನ ಸದುಪಯೋಗ ಪಡೆದುಕೊಳ್ಳಬೇಕೆಂದರು.
ಈ ಸಂದರ್ಭ ಕ್ವಿಜ್ ಸ್ಪರ್ಧಾ ವಿಜೇತರಿಗೆ ಗಣ್ಯರು ಬಹುಮಾನ ನೀಡಿ,ಗೌರವಿಸಿದ್ರು. ಹೀಗೆ ವಿವಿಧ ಸ್ಪರ್ಧೆಯ ವಿಜೇತರಿಗೆ ಸ್ಮರಣಿಕೆ ನೀಡಿ, ಗೌರವಿಸಲಾಯಿತು.ಇದೇ ವೇಳೆ ಪದ್ಮಶ್ರೀ ದಿವಂಗತ ಡಾ. ಎಸ್.ಆರ್. ರಂಗನಾಥನ್ ಅವರ ಜನ್ಮದಿನ ಭಾವಚಿತ್ರ ಕ್ಕೆ ಗಣ್ಯರು ಪುಪ್ಪನಮನ ಸಲ್ಲಿಸಿದರು.
ಈ ವೇಳೆ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ರೇ.ಫಾದರ್ ಅಜಿತ್.ಬಿ.ಮೆನೇಜಸ್ , ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಡೀನ್ ಡಾ|ಆಂಟನಿ ಸಿಲ್ವನ್ ಡಿಸೋಜಾ, ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಗ್ರಂಥಪಾಲಕಿ ಡಾ.ಜಾನೆಟ್ ಡಾಟಿ ಲೋಬೋ ಮೊದಲಾದವರು ಉಪಸ್ಥಿತರಿದ್ದರು.
ಈ ವೇಳೆ ಗ್ರಂಥಾಲಯ ಸಮಿತಿ ಅಧ್ಯಕ್ಷರಾದ ಡಾ.ವೆಂಕಟೇಶ್ ಬಿ.ಎಂ ಅವರು ಸ್ವಾಗತಿಸಿದರು.ಪ್ರಾಧ್ಯಾಪಕರಾದ ಡಾ.ಜಾನ್ ಮಾರ್ಟಿಸ್ ಅವರು ವಂದಿಸಿದರು.
ಪುಣೆಯಲ್ಲಿ ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಜನನಾಂಗವನ್ನು ಕಬ್ಬಿಣದ ಮೊಳೆಗಳಿಂದ ವಿರೂಪಗೊಳಿಸಿದ್ದಾನೆ ಮತ್ತು ಆಕೆಯ ಮೇಲೆ ಸಂದೇಹ ವ್ಯಕ್ತಪಡಿಸಿದ…
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಮಹಿಳಾ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಆಸರೆಯಾಗಿದೆ.
ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…
ತಾಯಿ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದ ನೌಬತ್ಪುರ ಪ್ರದೇಶದಲ್ಲಿ ಚಲಿಸುತ್ತಿದ್ದ…
ಶಿವಮೊಗ್ಗ ಹರ್ಷಾ ಹತ್ಯೆ ವೇಳೆ ಕಮ್ಯುನಿಸ್ಟರ ಜೊತೆ ಸರ್ಜಿ ಪೌಂಡೇಷನ್ ಶಾಂತಿ ನಡಿಗೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ನೈರುತ್ಯ ಪದವೀಧರ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭೆ ಕ್ಷೇತ್ರವಾದ ವರುಣದ ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಅಲ್ಲಿನ ಜನ…