Categories: ಮಂಗಳೂರು

ಮಂಗಳೂರು: ಪ್ರಕೃತಿ ಚಿಕಿತ್ಸಾ ವಿಭಾಗ ಆರಂಭ, ಶ್ಲಾಘನೀಯ – ರವಿಕುಮಾರ್ ಎಂ.ಆರ್

ಮಂಗಳೂರು: ನಗರದ ವೆನ್ ಲಾಕ್ ಆಸ್ಪತ್ರೆಯ ಆವರಣದಲ್ಲಿರುವ ಆಯುಷ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ರಾಜ್ಯದಲ್ಲೇ ಪ್ರಥಮ ಬಾರಿಗೆ ಪ್ರಕೃತಿ ಚಿಕಿತ್ಸಾ ವಿಭಾಗ ಆರಂಭಿಸಿರುವುದು ಅತ್ಯಂತ ಶ್ಲಾಘನೀಯ, ಇದು ಮುಂಬರುವ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ತಾಲೂಕು ಪ್ರದೇಶಗಳಾದ ಸುಳ್ಯ, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ ಆಸ್ಪತ್ರೆಗಳಲ್ಲೂ ಪ್ರಕೃತಿ ಚಿಕಿತ್ಸೆ ಆರಂಭಿಸಲು ಜಿಲ್ಲಾಡಳಿತದಿಂದ ಅಗತ್ಯ ಸಹಕಾರ ಹಾಗೂ ನೆರವು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ತಿಳಿಸಿದರು.

ಅವರು ಮಾ.25ರ ಶನಿವಾರ ನಗರದ ವೆನ್ ಲಾಕ್ ಆಯುಷ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 20 ಲಕ್ಷ ರೂ. ವೆಚ್ಚದ ಅತ್ಯಾಧುನಿಕ ನ್ಯಾಚುರೋಪತಿ ಉಪಕರಣಗಳ ಹಸ್ತಾಂತರ ಮತ್ತು ನೂತನ ಪ್ರಕೃತಿ ಚಿಕಿತ್ಸಾ ವಿಭಾಗಕ್ಕೆ ಚಾಲನೆ ನೀಡಿ ಮಾತನಾಡಿದರು.

ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಈ ರೀತಿಯ ಪ್ರಕೃತಿ ಚಿಕಿತ್ಸೆಗೆ ಅನುಕೂಲವಾಗಬೇಕಾದ ಭೂಮಿ ಮತ್ತು ಮೂಲಸೌಲಭ್ಯಕ್ಕೆ ಜಿಲ್ಲಾಡಳಿತ ಸಹಕಾರ ನೀಡಲಿದೆ ಎಂದ ಅವರು, ಇತ್ರೀಚೆಗೆ ಆಯುರ್ವೇದ, ನ್ಯಾಚುರೋಪತಿ, ಯುನಾನಿ ಚಿಕಿತ್ಸೆಗೆ ಹೆಚ್ಚಿನ ಬೇಡಿಕೆ ಇದೆ. ಸರ್ಕಾರಿ ಆಯುಷ್ ಆಸ್ಪತ್ರೆಯೊಂದರಲ್ಲಿ ಸುಸಜ್ಜಿತವಾದ ಪ್ರಕೃತಿ ಚಿಕಿತ್ಸಾ ವಿಭಾಗ ಆರಂಭಿಸಿರುವುದು ನಗರದ ಬಡ ರೋಗಿಗಳಿಗೆ ವರವಾಗಿದೆ, ಜಿಲ್ಲೆಯ ಗ್ರಾಮೀಣ ಪ್ರದೇಶದ ಜನರಿಗೂ ಈ ಸೌಲಭ್ಯ ದೊರೆಯಬೇಕು. ಇದಕ್ಕಾಗಿ ತಾಲೂಕು ಮಟ್ಟದಲ್ಲಿ ಕಟ್ಟಡ, ಮೂಲಸೌಲಭ್ಯ ಒದಗಿಸಲಾಗುವುದು ಎಂದರು.

ಆಯುಷ್ ಆಸ್ಪತ್ರೆಗೆ ಮಂಗಳೂರು ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ (ಎಂಸಿಎಫ್) ಸುಮಾರು 20 ಲಕ್ಷ ರೂ.ಮೌಲ್ಯದ ಅತ್ಯಾಧುನಿಕ ಪ್ರಕೃತಿ ಚಿಕಿತ್ಸೆ ಸಂಬಂಧಿತ ಉಪಕರಣಗಳನ್ನು ಒದಗಿಸಿದೆ. ಈ ಮೂಲಕ ಎಂಸಿಎಫ್ ಸಿಎಸ್‌ಆರ್ ನಿಧಿ ಉತ್ತಮ ಕಾರ್ಯಕ್ಕೆ ವಿನಿಯೋಗವಾಗಿದೆ ಎಂದರು.

ಎಂಸಿಎಫ್ ಚೀಫ್ ಪ್ರೊಡಕ್ಷನ್ ಆಫೀಸರ್ ಗಿರೀಶ್ ಎಸ್., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕಿಶೋರ್‌ಕುಮಾರ್, ವೆನ್ಲಾಕ್ ಆಸ್ಪತ್ರೆ ಜಿಲ್ಲಾ ಸರ್ಜನ್ ಡಾ. ಸದಾಶಿವ ಶ್ಯಾನುಭೋಗ್ ವೇದಿಕೆಯಲ್ಲಿದ್ದರು.

ಜಿಲ್ಲಾ ಆಯುಷ್ ಅಧಿಕಾರಿ ಡಾ. ಮೊಹಮ್ಮದ್ ಇಕ್ಬಾಲ್ ಪ್ರಾಸ್ತಾವಿಕವಾಗಿ ಮಾತನಾಡಿ, ಸರ್ಕಾರಿ ಮಟ್ಟದಲ್ಲಿ ಪ್ರಥಮ ಬಾರಿಗೆ ಅತ್ಯಾಧುನಿಕ ಉಪಕರಣಗಳನ್ನೊಳಗೊಂಡ ಸುಸಜ್ಜಿತ ಪ್ರಕೃತಿ ಚಿಕಿತ್ಸಾ ವಿಭಾಗವೊಂದು ಸಾರ್ವಜನಿಕತ ಸೇವೆಗೆ ತೆರದುಕೊಂಡಿದೆ. ಈ ಕೇಂದ್ರದಲ್ಲಿ ಎಲ್ಲ ವಿಧದ ಜಲಚಿಕಿತ್ಸೆ, ಸೋನಾಬಾತ್, ಅಕ್ಯುಪಂಕ್ಚರ್, ಅಕ್ಯುಪ್ರೆಶರ್, ಅಯಾನ್ ಡೆಟಾಕ್ಸ್ ಥೆರಪಿ, ಮ್ಯಾಗ್ನೆಟಿಕ್ ಥೆರಪಿ, ಮ್ಯೂಸಿಕ್ ಥೆರಪಿ, ಮಡ್‌ಬಾತ್ ಸಹಿತ ಎಲ್ಲ ಪ್ರಮುಖ ಹಾಗೂ ಅಪರೂಪದ ಚಿಕಿತ್ಸೆಗಳು ಲಭ್ಯ. ಬಿಪಿಎಲ್ ಕಾರ್ಡ್‌ದಾರರಿಗೆ ಸದ್ಯ ಉಚಿತವಾಗಿ ಚಿಕಿತ್ಸೆ ಲಭ್ಯವಿದ್ದು, ಮುಂಬರುವ ದಿನಗಳಲ್ಲಿ ಸರಕಾರಿ ಮಾರ್ಗಸೂಚಿಯಂತೆ ಎಪಿಎಲ್ ಕಾರ್ಡ್‌ದಾರರಿಗೂ ಕನಿಷ್ಠ ದರದಲ್ಲಿ ಚಿಕಿತ್ಸೆ ದೊರೆಯಲಿದೆ ಎಂದರು.

ಟ್ರೈನಿ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು.

Ashika S

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

2 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

2 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

3 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

3 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

3 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

3 hours ago