ಮಂಗಳೂರು: ಕರಾವಳಿಯಲ್ಲಿ ಎನ್ಐಎ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಇಂದು ಕೂಡ ಕೆಲವು ಪ್ರದೇಶಗಳಲ್ಲಿ ಶೋಧ ಕಾರ್ಯ ಮುಂದುವರಿದಿದೆ. ನಿನ್ನೆ ಮೂರು ರಾಜ್ಯದಲ್ಲಿ ಎನ್ಐಎ ಏಕಕಾಲಕ್ಕೆ ದಾಳಿ ನಡೆಸಿತ್ತು.
ಬಿಹಾರ, ಕರ್ನಾಟಕ ಮತ್ತು ಕೇರಳದಲ್ಲಿ ದಾಳಿ ನಡೆಸಿತ್ತು. ಒಟ್ಟು 85 ಪ್ರದೇಶಗಳಲ್ಲಿ ಎನ್ಐಎ ದಾಳಿ ನಡೆಸಿತ್ತು. ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆ, ಶಿವಮೊಗ್ಗದ 25 ಕಡೆ ದಾಳಿ ನಡೆಸಲಾಗಿತ್ತು. ಕೇರಳದ ಕಾಸರಗೋಡು, ಮಲ್ಲಾಪುರಂ, ಕೋಝಿಕೊಡ್, ತಿರುವನಂತಪುರಂ ನಲ್ಲಿ ದಾಳಿ ಕೈಗೊಳ್ಳಲಾಗಿತ್ತು. ಈ ವೇಳೆ 17.5 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿತ್ತು.
ಈ ನಿಟ್ಟಿನಲ್ಲಿ ಹಲವು ಪ್ರದೇಶಗಳಲ್ಲಿ ಇಂದು ಕೂಡ ಶೋಧ ಕಾರ್ಯ ಮುಂದುವರಿದಿದೆ.