ಮಂಗಳೂರು: ಮಂಗಳೂರು ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ್ದರಿಂದ ಮೊಹಿಯುದ್ದೀನ್ ಬಾವಾ ಅವರು ಜೆಡಿಎಸ್ನಿಂದ ಸ್ಪರ್ಧೆ ಮಾಡಲಿದ್ದಾರೆ.
ಈ ಕ್ಷೇತ್ರದಲ್ಲಿ ಟಿಕೆಟ್ಗಾಗಿ ಮೊಹಿಯುದ್ದೀ ಬಾವಾ ಮತ್ತು ಇನಾಯತ್ ಅಲಿ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿತ್ತು. ಆದರೆ ಕೈ ಹೈಕಮಾಂಡ್ ಅಲಿ ಅವರಿಗೆ ಟಿಕೆಟ್ ನೀಡಿದೆ. ಈ ಬಗ್ಗೆ ಮೊದಲೇ ವಿಷಯ ಅರಿತಿದ್ದ ಬಾವ ಟಿಕೆಟ್ಗಾಗಿ ಜೆಡಿಎಸ್ ಪಕ್ಷದ ಎಚ್.ಡಿ. ದೇವೆಗೌಡ ಸೇರಿದಂತೆ ಹಿರಿಯ ಮುಖಂಡರನ್ನು ಸಂಪರ್ಕಿಸಿದ್ದರು. ಮಂಗಳೂರು ಉತ್ತರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಅವರು ನಾಮಪತ್ರ ಸಲ್ಲಿಸಲಿದ್ದಾರೆ.