ಮಂಗಳೂರು: ನಗರದ ಶಕ್ತಿನಗರದಲ್ಲಿರುವ ಸಾನಿಧ್ಯ ಮಾನಸಿಕ ಭಿನ್ನ ಸಾಮರ್ಥ್ಯದ ಮಕ್ಕಳ ವಸತಿ ಶಾಲೆಯಲ್ಲಿ ಓಣಂ ಹಬ್ಬ ಬಹಳ ಸಂಭ್ರಮದಿಂದ ನಡೆಯಿತು.
ಜಸ್ಟಿಸ್ ಕೆಎಸ್ ಹೆಗ್ಡೆ ಆಸ್ಪತ್ರೆಯ ತುರ್ತು ವಿಭಾಗದ ಮುಖ್ಯ ವೈದ್ಯಾಧಿಕಾರಿ ಡಾ| ಗೌತಮ್ ಶೆಟ್ಟಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಮಂಗಳೂರು ಕೇಂದ್ರ ರೈಲು ನಿಲ್ದಾಣದ ಉಪ ಸ್ಟೇಶನ್ ಮ್ಯಾನೇಜರ್ ಕಿಶನ್ ಕುಮಾರ್ ಎಂ.ಎಸ್., ಲಯನ್ಸ್ ಕ್ಲಬ್ನ ಓಣಂ ಸಂಚಾಲಕ ಸತೀಶನ್ ಅತಿಥಿಗಳಾಗಿ ಭಾಗವಹಿಸಿದ್ದರು.
ವಿಶೇಷ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯ ಕ್ರಮ ನಡೆಯಿತು. ಸಾನಿಧ್ಯದಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಮಾತ್ರವಲ್ಲದೆ ನೆರೆಯ ಕೇರಳ ರಾಜ್ಯದಿಂದ ವಿಶೇಷ ಮಕ್ಕಳು, ವಿಶೇಷ ಶಿಕ್ಷಕರ ನೆರವಿನೊಂದಿಗೆ ಪೂಕಳಂ (ಹೂವಿನ ರಂಗೋಲಿ) ರಚಿಸಿದರು.
ಕಾರ್ಯ ಕ್ರಮ ವನ್ನು ಜಸ್ಟಿಸ್ ಕೆಎಸ್ ಹೆಗ್ಡೆ ಆಸ್ಪತ್ರೆಯ ತುರ್ತು ವಿಭಾಗದ ಮುಖ್ಯ ವೈದ್ಯಾಧಿಕಾರಿ ಡಾ| ಗೌತಮ್ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು. ಶಾಲಾ ಆಡಳಿತ ನಿರ್ದೇಶಕ ವಸಂತ ಶೆಟ್ಟಿ ಉಪಸ್ಥಿತರಿದ್ದರು.