News Karnataka Kannada
Monday, April 29 2024
ಮಂಗಳೂರು

ಮಂಗಳೂರು: ಭಿನ್ನ ಸಾಮರ್ಥ್ಯದ ಮಕ್ಕಳ ವಸತಿ ಶಾಲೆಯಲ್ಲಿ ಓಣಂ ಹಬ್ಬ ಆಚರಣೆ

Onam festival celebrated in residential school for differently-abled children
Photo Credit : News Kannada

ಮಂಗಳೂರು: ನಗರದ ಶಕ್ತಿನಗರದಲ್ಲಿರುವ ಸಾನಿಧ್ಯ ಮಾನಸಿಕ ಭಿನ್ನ ಸಾಮರ್ಥ್ಯದ ಮಕ್ಕಳ ವಸತಿ ಶಾಲೆಯಲ್ಲಿ ಓಣಂ ಹಬ್ಬ ಬಹಳ ಸಂಭ್ರಮದಿಂದ ನಡೆಯಿತು.

ಜಸ್ಟಿಸ್ ಕೆಎಸ್ ಹೆಗ್ಡೆ ಆಸ್ಪತ್ರೆಯ ತುರ್ತು ವಿಭಾಗದ ಮುಖ್ಯ ವೈದ್ಯಾಧಿಕಾರಿ ಡಾ| ಗೌತಮ್ ಶೆಟ್ಟಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಮಂಗಳೂರು ಕೇಂದ್ರ ರೈಲು ನಿಲ್ದಾಣದ ಉಪ ಸ್ಟೇಶನ್ ಮ್ಯಾನೇಜರ್ ಕಿಶನ್ ಕುಮಾರ್ ಎಂ.ಎಸ್., ಲಯನ್ಸ್ ಕ್ಲಬ್‌ನ ಓಣಂ ಸಂಚಾಲಕ ಸತೀಶನ್ ಅತಿಥಿಗಳಾಗಿ ಭಾಗವಹಿಸಿದ್ದರು.

ವಿಶೇಷ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯ ಕ್ರಮ ನಡೆಯಿತು. ಸಾನಿಧ್ಯದಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಮಾತ್ರವಲ್ಲದೆ ನೆರೆಯ ಕೇರಳ ರಾಜ್ಯದಿಂದ ವಿಶೇಷ ಮಕ್ಕಳು, ವಿಶೇಷ ಶಿಕ್ಷಕರ ನೆರವಿನೊಂದಿಗೆ ಪೂಕಳಂ (ಹೂವಿನ ರಂಗೋಲಿ) ರಚಿಸಿದರು.

ಕಾರ್ಯ ಕ್ರಮ ವನ್ನು ಜಸ್ಟಿಸ್ ಕೆಎಸ್ ಹೆಗ್ಡೆ ಆಸ್ಪತ್ರೆಯ ತುರ್ತು ವಿಭಾಗದ ಮುಖ್ಯ ವೈದ್ಯಾಧಿಕಾರಿ ಡಾ| ಗೌತಮ್ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು. ಶಾಲಾ ಆಡಳಿತ ನಿರ್ದೇಶಕ ವಸಂತ ಶೆಟ್ಟಿ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು