News Karnataka Kannada
Saturday, May 04 2024
ಮಂಗಳೂರು

ಮಂಗಳೂರು: ಕರಾವಳಿಯಲ್ಲಿ ಮಳೆ ಇಳಿಕೆ ಸಾಧ್ಯತೆ, 2 ದಿನಗಳ ಕಾಲ ಆರೆಂಜ್‌ ಅಲರ್ಟ್‌ ಘೋಷಣೆ

Mangaluru (2)
Photo Credit : News Kannada

ಮಂಗಳೂರು: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯಾಗುತ್ತಿದ್ದುದರಿಂದ ಭಾನುವಾರ ಜಿಲ್ಲೆಯ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿತ್ತು. ಬಂಟ್ವಾಳದಲ್ಲಿ ನೇತ್ರಾವತಿಯ ಅಪಾಯದ ಮಟ್ಟ 8.5 ಮೀ. ಇದ್ದರೆ, ಭಾನುವಾರ 7.9 ಮೀ. ಎತ್ತರಕ್ಕೆ ನೀರು ಹರಿಯುತ್ತಿತ್ತು. ಉಪ್ಪಿನಂಗಡಿಯಲ್ಲಿ ಅಪಾಯದ ಮಟ್ಟ 31.5 ಮೀ. ಇರುವಲ್ಲಿ28.20 ಮೀ. ಎತ್ತರ ನೀರಿನ ಮಟ್ಟ ದಾಖಲಾಗಿತ್ತು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ನಿರಂತರವಾಗಿ ಸುರಿಯುತ್ತಿದ್ದ ಮಳೆ ಭಾನುವಾರ ಕೊಂಚ ಮಟ್ಟಿಗೆ ಕ್ಷೀಣಿಸಿತ್ತು. ಭಾರೀ ಮಳೆ ಸುರಿಯುವ ರೆಡ್‌ ಅಲರ್ಟ್‌ ನೀಡಲಾಗಿದ್ದರೂ ನಿರೀಕ್ಷೆಯಷ್ಟು ಬಂದಿಲ್ಲ. ಆ.8,9ರಂದು ಕರಾವಳಿಗೆ ಆರೇಂಜ್‌ ಅಲರ್ಟ್‌ ನೀಡಲಾಗಿದೆ. ಅದರ ನಂತರ 2 ದಿನ ಯೆಲ್ಲೋ ಅಲರ್ಟ್‌ ಇರಲಿದೆ.

ಭಾನುವಾರ ಬೆಳಗ್ಗಿನಿಂದ ಮಳೆ ಆರಂಭವಾಗಿದ್ದು, ಬಳಿಕ ಬಿಡುವು ನೀಡಿತ್ತು. ಆಗಾಗ ಬಿಟ್ಟೂ ಬಿಟ್ಟೂ ಅಲ್ಪ ಮಳೆ ಸುರಿದಿದೆ. ಮಧ್ಯಾಹ್ನ ಕೆಲ ಹೊತ್ತು ಬಿಸಿಲು ಕೂಡ ಮೂಡಿತ್ತು. ಅದು ಬಿಟ್ಟರೆ ದಿನವಿಡಿ ಮೋಡ ಕವಿದ ವಾತಾವರಣವಿತ್ತು. ಗ್ರಾಮಾಂತರದಲ್ಲಿ ತೀವ್ರ ಚಳಿ ಆವರಿಸಿತ್ತು.

9 ಮನೆ ಭಾಗಶಃ ಹಾನಿ: ಮಳೆಯಿಂದಾಗಿ ಜಿಲ್ಲೆಯ 9 ಮನೆಗಳಿಗೆ ಭಾಗಶಃ ಹಾನಿ ಉಂಟಾಗಿದೆ. 12 ವಿದ್ಯುತ್‌ ಕಂಬಗಳಿಗೆ ಹಾನಿಯಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಅಪಾಯದ ಸ್ಥಳಗಳಲ್ಲಿ ವಾಸಿಸುತ್ತಿದ್ದ 76 ಮಂದಿಯನ್ನು 3 ಕಾಳಜಿ ಕೇಂದ್ರಗಳಲ್ಲಿ ಇರಿಸಲಾಗಿದೆ. ಎಸ್‌ಡಿಆರ್‌ಎಫ್‌ ಮತ್ತು ಎನ್‌ಡಿಆರ್‌ಎಫ್‌ ತಂಡಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ.

ನದಿ ಮಟ್ಟ ಏರಿಕೆ: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯಾಗುತ್ತಿದ್ದುದರಿಂದ ಭಾನುವಾರ ಜಿಲ್ಲೆಯ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿತ್ತು. ಬಂಟ್ವಾಳದಲ್ಲಿ ನೇತ್ರಾವತಿಯ ಅಪಾಯದ ಮಟ್ಟ 8.5 ಮೀ. ಇದ್ದರೆ, ಭಾನುವಾರ 7.9 ಮೀ. ಎತ್ತರಕ್ಕೆ ನೀರು ಹರಿಯುತ್ತಿತ್ತು. ಉಪ್ಪಿನಂಗಡಿಯಲ್ಲಿ ಅಪಾಯದ ಮಟ್ಟ 31.5 ಮೀ. ಇರುವಲ್ಲಿ28.20 ಮೀ. ಎತ್ತರ ನೀರಿನ ಮಟ್ಟ ದಾಖಲಾಗಿತ್ತು.

ಮಳೆ ವಿವರ: ಶನಿವಾರ ಬೆಳಗ್ಗಿನಿಂದ ಭಾನುವಾರ ಬೆಳಗ್ಗಿನವರೆಗೆ ಸರಾಸರಿ 85 ಮಿ.ಮೀ. ಮಳೆ ದಾಖಲಾಗಿದೆ. ಬೆಳ್ತಂಗಡಿಯಲ್ಲಿ 80.3 ಮಿ.ಮೀ., ಬಂಟ್ವಾಳದಲ್ಲಿ 89.7 ಮಿ.ಮೀ., ಮಂಗಳೂರಲ್ಲಿ 68.6 ಮಿ.ಮೀ., ಪುತ್ತೂರಲ್ಲಿ 88.1 ಮಿ.ಮೀ., ಸುಳ್ಯದಲ್ಲಿ 89.1 ಮಿ.ಮೀ., ಮೂಡುಬಿದಿರೆಯಲ್ಲಿ 81.3 ಮಿ.ಮೀ., ಕಡಬದಲ್ಲಿ 94.6 ಮಿ.ಮೀ. ಮಳೆ ಸುರಿದಿದೆ.

ಆ.8ರವರೆಗೆ ಅರಬ್ಬಿ ಸಮುದ್ರ ಪ್ರಕ್ಷುಬ್ಧವಾಗಿರುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲ ದೋಣಿಗಳು ಕೂಡಲೆ ದಡ ಸೇರುವಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ಸೂಚನೆ ನೀಡಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30359
ಶರಣ್‌ ರಾಜ್

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು