ಮಂಗಳೂರು: ಪಂಜಿ ಮುಗೇರು ವಿದ್ಯಾನಗರದಲ್ಲಿ ಮಂಗಳೂರು ಉತ್ತರ ಕ್ಷೇತ್ರ ಅಭ್ಯರ್ಥಿ ಇನಾಯತ್ ಅಲಿ ಚುನಾವಣಾ ಪ್ರಚಾರ ಸಭೆ ನಡೆಸಿದರು. ಬಿಜೆಪಿಯ ಬೆಲೆಯೇರಿಕೆ ನೀತಿಯು ಜನರಿಗೆ ಹೊರೆಯಾಗಿದ್ದು, ಸಂಕಷ್ಟದ ಜೀವನ ನಡೆಸುವಂತಾಗಿದೆ. ಯುವಕರು ನಿರುದ್ಯೋಗ ಸಮಸ್ಯೆ ಎದುರಿಸುತ್ತಿದ್ದಾರೆ. ಇದಕ್ಕೆಲ್ಲ ಪರಿಹಾರ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಎಂದು ತಿಳಿಸಿದರು.
ಕ್ಷೇತ್ರದ ಹಲವು ಗ್ರಾಮಗಳಲ್ಲಿ ಮೂಲಸೌಕರ್ಯಗಳ ಸಮಸ್ಯೆಗಳಿದ್ದು, ಅದನ್ನು ಪರಿಹಾರ ಮಾಡುವುದೇ ನನ್ನ ಮೊದಲ ಆದ್ಯತೆ. ಕಾಂಗ್ರೆಸ್ ಘೋಷಿಸಿರುವ ಗ್ಯಾರಂಟಿಗಳು ಬೆಲೆಯೇರಿಕೆ ಹೊರೆಯನ್ನು ಇಳಿಸಲಿದ್ದು, ನೆಮ್ಮದಿಯ ಜೀವನ ನಿಮ್ಮದಾಗುತ್ತದೆ ಎಂದು ತಿಳಿಸಿದರು.
ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಮೀನಕಳಿಯದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಬಿಜೆಪಿ ಸರ್ಕಾರದ ಭರವಸೆ ಮಾತುಗಳನ್ನ ಕೇಳಿ ಜನರು ರೋಸಿ ಹೋಗಿದ್ದು, ಹೊಸ ಬದಲಾವಣೆ ಬಯಸುತ್ತಿದ್ದಾರೆ. ಆ ಬದಲಾವಣೆ ಸಾಧ್ಯವಾಗೋದು ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ. ಅದಕ್ಕೆ ನಿಮ್ಮ ಸಹಕಾರ, ಬೆಂಬಲ ಅಗತ್ಯ ಎಂದರು.