ಮಂಗಳೂರು: ಪಚ್ಚನಾಡಿ ಡಂಪಿಂಗ್ ಯಾರ್ಡ್ ನ ಬೋಂದೆಲ್, ಪಚ್ಚನಾಡಿ, ವಾಮಂಜೂರು ನೀರುಮಾರ್ಗವರೆಗೂ ಜನರಿಗೆ ದೊಡ್ಡ ಸಮಸ್ಯೆ ಆಗಿದೆ. ಬೆಂಕಿ ಆರಿಸಿದರೂ ಮತ್ತೆ ಮತ್ತೆ ಬೆಂಕಿ ಆವರಿಸುತ್ತದೆ. ಪ್ರತಿಸಲ ನಾನು ಭೇಟಿ ನೀಡುತ್ತೇನೆ. ಆದರೆ ಶಾಸಕರು ಇದುವರೆಗೆ ಘಟನಾ ಸ್ಥಳಕ್ಕೆ ಬಂದಿಲ್ಲ ಎಂದು ಮಾಜಿ ಶಾಸಕ ಮೊಯಿದೀನ್ ಭಾವ ಹೇಳಿದರು.
ಜನರು ಶಾಂತಿಯಿಂದ ಸಹಕಾರ ನೀಡುತ್ತಿದ್ದಾರೆ. ನೀವು ಮಾಸ್ಕ್ ಹಾಕಿ ಬರುತ್ತೀರಿ. ಆದರೆ 24 ಗಂಟೆ ತ್ಯಾಜ್ಯ ಹೊಗೆ ಸೇವಿಸುವ ಜನರ ಬಗ್ಗೆ ಕಾಳಜಿ ಮಾಡಿದ್ದೀರಾ. ಇದು ಮಕ್ಕಳ ಮೇಲೆ ಯಾವ ರೀತಿಯ ಪರಿಣಾಮ ಬೀರಬಹುದು ಯೋಚಿಸಿ ಎಂದರು.
ಶುಕ್ರವಾರ ಸಂಜೆ 4ಗಂಟೆಗೆ ಪ್ರತಿಭಟನೆ ಮಾಡ್ತಿದೇವೆ. ನಮ್ಮ ಜನರಿಗೆ ನ್ಯಾಯ ಬೇಕು. ತ್ಯಾಜ್ಯ ಸಂಸ್ಕರಣೆ ವ್ಯವಸ್ಥೆ ಮತ್ತು ಬೆಂಕಿಗೆ ಶಾಶ್ವತ ಪರಿಹಾರ ಕಂಡುಹಿಡಿಯಬೇಕು ಅದಕ್ಕಾಗಿ ನಾವು ಜನರೊಂದಿಗೆ ಸೇರಿ ಹೋರಾಟ ಮಾಡುತ್ತೇವೆ ಎಂದರು.
ಪಚ್ಚನಾಡಿಯ ಮಲಿನ ನೀರು ಮರವೂರು ಡ್ಯಾಂಗೆ ಸೇರುತ್ತಿದೆ. ಆ ಬಗ್ಗೆಯೂ ಹೋರಾಟ ಮಾಡಲು ತೀರ್ಮಾನ ಮಾಡ್ತೇವೆ ಎಂದರು.