News Karnataka Kannada
Monday, April 29 2024
ಮಂಗಳೂರು

ಮಂಗಳೂರು: ಸಮಾಜಮುಖಿ ಕಾರ್ಯ ಮಾಡಿ ಭೇಷ್ ಏನಿಸಿಕೊಂಡ ಪೊಲೀಸ್ ಕಾನ್ ಸ್ಟೆಬಲ್ ಶರಣಪ್ಪ

mangaluru-police-constable-sharanappa-who-has-been-involved-in-social-work
Photo Credit : News Kannada

ಮಂಗಳೂರು:  ನಗರದಲ್ಲಿ ಟ್ರಾಫಿಕ್ ಪೋಲಿಸರು ದುಡ್ಡು ವಸೂಲಿಗೆ ನಿಲ್ತಾರೆ ಅವರಿಗೆ ಕಿಂಚಿತ್ತೂ ದಯೆ ಕರುಣೆ ಅನ್ನೋದೆ ಇಲ್ಲ ಎಂಬ ಆಪಾದನೆ ಪ್ರತಿನಿತ್ಯ ಕೇಳಿಬರುತ್ತಿದೆ. ಆದ್ರೆ ಯೂನಿಫಾರ್ಮ್ ಹಾಕಿದ ಪೊಲೀಸರ ಒಳಗೂ ಕಾಳಜಿ ಇದೆ.

ಸಾರ್ವಜನಿಕರ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ಪೊಲೀಸ್ ಕಾನ್ ಸ್ಟೆಬಲ್ ಒಬ್ಬರು ವಾಹನ ಸವಾರರ ಕಷ್ಟ ಅರಿತು ಸ್ವತಃ ಗುಂಡಿ ಮುಚ್ಚಿ ಜನರ ಮನ ಗೆದ್ದಿದ್ದಾರೆ.

ಮಂಗಳೂರು ನಗರ ಪಶ್ಚಿಮ ಪಾಂಡೇಶ್ವರ ಸಂಚಾರಿ ಪೊಲೀಸ್ ಠಾಣೆಯ ಕಾನ್ ಸ್ಟೆಬಲ್ ಶರಣಪ್ಪ ಎಂಬವರು ನಗರದ ಸ್ಟೇಟ್ ಬ್ಯಾಂಕ್ ಬಳಿಯ ರಾವ್ ಆಂಡ್ ರಾವ್ ಸರ್ಕಲ್ ಬಳಿಯ ರಸ್ತೆಯಲ್ಲಿ ಸ್ಮಾರ್ಟ್ ಸಿಟಿಯ ಕಾಮಗಾರಿಯಿಂದ ದೊಡ್ಡ ದೊಡ್ಡ ಹೊಂಡ ನಿರ್ಮಾಣವಾಗಿತ್ತು. ಇಂದು ಬೆಳಿಗ್ಗೆ ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಶರಣಪ್ಪ ಅವರು ವಾಹನ ಸವಾರರ ಕಷ್ಟಕ್ಕೆ ಮರುಗಿ ಹತ್ತಿರದಲ್ಲೇ ಇದ್ದ ಇಂಟರ್ ಲಾಕ್ ತುಂಡುಗಳನ್ನು ಜೋಡಿಸಿ ರಸ್ತೆ ರಿಪೇರಿಗೆ ಇಳಿದಿದ್ದಾರೆ.

ಇದನ್ನು ಕಂಡ ರಿಕ್ಷಾ ಡ್ರೈವರ್ ಸೇರಿ ಹಲವರು ಇವರಿಗೆ ಕೈ ಜೋಡಿಸಿದರು. ಈ ಸಮಾಜಮುಖಿ ಕೆಲಸವನ್ನು ಸಾರ್ವಜನಿಕರೊಬ್ಬರು ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಸದ್ಯ ಈ ಫೋಟೋ ವೈರಲ್ ಆಗಿದ್ದು ಶರಣಪ್ಪ ಅವರ ಸಮಾಜಮುಖಿ ಕಾರ್ಯಕ್ಕೆ ಭೇಷ್ ಎಂದಿದ್ದಾರೆ. ಈ ಘಟನೆ ಮೂಲಕವಾದರೂ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಸುವ ಎಂಜಿನಿಯರುಗಳು ಕಾಮಗಾರಿ ಕೊನೆಗೊಳಿಸುವಾಗ ಎಚ್ಚೆತ್ತು ಕಾಮಗಾರಿಯನ್ನು ಸಂಪೂರ್ಣವಾಗಿ ಕೊನೆಗೊಳಿಸುವುದು ಉತ್ತಮ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30359
ಶರಣ್‌ ರಾಜ್

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು