News Karnataka Kannada
Sunday, April 28 2024
ಮಂಗಳೂರು

ಮಂಗಳೂರು: ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಜಾಗಕ್ಕೆ ಪೊಲೀಸ್ ದಾಳಿ

Police raid a place where card gambling was taking place
Photo Credit : News Kannada

ಮಂಗಳೂರು: ಪಣಂಬೂರು ಠಾಣೆ ವ್ಯಾಪ್ತಿಯ ಮೀನಕಳಿಯದಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಜಾಗಕ್ಕೆ ಪೊಲೀಸರು ದಾಳಿ ನಡೆಸಿದ್ದು 14 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಮೀನಕಳಿಯದ ರೈಲ್ವೇ ಟ್ರಾಕ್ ಬಳಿಯ ಕಟ್ಟಡ ಒಂದರಲ್ಲಿ ಅಂದರ್ ಬಾಹರ್ ಇಸ್ಪೀಟ್ ಆಟ ಆಡುತ್ತಿದ್ದ ಬಗ್ಗೆ ಪಣಂಬೂರು ಪೊಲೀಸರಿಗೆ ಖಚಿತ ಮಾಹಿತಿ ಬಂದಿತ್ತು. ಭಾನುವಾರ ಮಧ್ಯಾಹ್ನ ಪೊಲೀಸರು ದಾಳಿ ನಡೆಸಿದ್ದು ಕಟ್ಟಡದ ಒಳಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಒಟ್ಟು
14 ಮಂದಿಯಿಂದ 78,810 ರೂಪಾಯಿ ನಗದು ಹಾಗೂ ಎರಡು ಬೈಕ್ ವಶಕ್ಕೆ ಪಡೆಯಲಾಗಿದೆ.

ಆರೋಪಿಗಳಿಂದ ಪೊಲೀಸರು 11 ಮೊಬೈಲ್ ಫೋನ್ ವಶಕ್ಕೆ ಪಡೆದಿದ್ದಾರೆ. ಇದರಲ್ಲಿ ನಾಲೈದು ಮಂದಿ ಮೀನಕಳಿಯ ಆಸುಪಾಸಿನವರಾಗಿದ್ದು ಉಳಿದವರು ಸುರತ್ಕಲ್ ಕಡೆಯ ಕೂಲಿ ಕಾರ್ಮಿಕರು ಎಂದು ಪೊಲೀಸರು ತಿಳಿಸಿದ್ದಾರೆ. ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಯಾರು ಪ್ರಮುಖರಿದ್ದಾರೆ, ಎಷ್ಟು ಸಮಯದಿಂದ ಈ ರೀತಿ ಜೂಜಾಟ ನಡೆಸುತ್ತಿದ್ದಾರೆ ಎಂಬ ಬಗ್ಗೆ ತನಿಖೆ ಮಾಡಲಾಗುವುದು ಎಂದು ಪಣಂಬೂರು ಪೊಲೀಸ್ ನಿರೀಕ್ಷಕರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು