News Karnataka Kannada
Monday, April 29 2024
ಮಂಗಳೂರು

ಮಂಗಳೂರು: ಜ್ಯುವೆಲರಿ ಸಿಬ್ಬಂದಿ ಹತ್ಯೆ ಪ್ರಕರಣ, ಪೊಲೀಸರಿಂದ ಶಂಕಿತನ ಪೋಟೋ ಬಿಡುಗಡೆ

Police release photo of suspect in jewellery staff murder case
Photo Credit : News Kannada

ಮಂಗಳೂರು: ನಗರದ ಹಂಪನ ಕಟ್ಟೆಯ ಜ್ಯುವೆಲರಿಯೊಂದರಲ್ಲಿ ಕಳೆದ ಶುಕ್ರವಾರ ಹಾಡುಹಗಲೇ ನಡೆದ ಸಿಬ್ಬಂದಿ ಕೊಲೆ, ಅಂಗಡಿ ದರೋಡೆ ಪ್ರಕರಣದ ಆರೋಪಿಯ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ. ಇದರ ಬೆನ್ನಲ್ಲೇ ಪ್ರಕರಣದ ಶಂಕಿತ ಆರೋಪಿಯ ಸಿಸಿ ಕೆಮರಾ ಚಿತ್ರವನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ.

ಕಪ್ಪು ಬಣ್ಣದ ಜರ್ಕಿನ್, ಜೀನ್ಸ್ ಪ್ಯಾಂಟ್ ಧರಿಸಿ, ಶೂ ಧರಿಸಿದ್ದು, ಹೆಗಲಿನಲ್ಲಿ ಬ್ಯಾಗ್ ಹಾಕಿಕೊಂಡಿದ್ದು, ಗುರುತು ಮರೆಮಾಚಲು ಕ್ಯಾಪ್, ಮಾಸ್ಕ್, ಕೂಲಿಂಗ್ ಗ್ಲಾಸ್ ಧರಿಸಿಕೊಂಡಿರುವ ಶಂಕಿತ ಆರೋಪಿಯ ಸಿಸಿ ಕೆಮರಾದಲ್ಲಿ ಸೆರೆ ಸಿಕ್ಕ ಪೋಟೋ ಬಿಡುಗಡೆಗೊಳಿಸಿದ್ದಾರೆ .

ಈ ವ್ಯಕ್ತಿಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಇದ್ದಲ್ಲಿ ಅದನ್ನು ಪೊಲೀಸರಿಗೆ ನೀಡುವಂತೆ ಕೋರಲಾಗಿದ್ದು ಮಾಹಿತಿದಾರರ ಗೌಪ್ಯತೆ ಕಾಪಾಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಜ್ಯುವೆಲರಿಯೊಂದಕ್ಕೆ ಹಾಡುಹಗಲೇ ನುಗ್ಗಿದ್ದ ದುಷ್ಕರ್ಮಿ ಸಿಬಂದಿ ರಾಘವ ಆಚಾರ್ಯ (55) ಅವರಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿ ಒಟ್ಟು 12 ಗ್ರಾಂ ತೂಕದ 60,000 ರೂ. ಮೌಲ್ಯದ 3 ಚಿನ್ನದ ಸರಗಳನ್ನು ದರೋಡೆ ಮಾಡಿ ಪರಾರಿಯಾಗಿದ್ದ.ಸಾರ್ವಜನಿಕರಿಗೆ ಮಾಹಿತಿ ಇದ್ದಲ್ಲಿ ಸಂಪರ್ಕಿಸಿಬೇಕಾದ ಪೊಲೀಸ್ ಅಧಿಕಾರಿಗಳು:

ಪಿ ಎ ಹೆಗಡೆ -ಎಸಿಪಿ ಸಿಸಿಬಿ, ಮಂಗಳೂರು ನಗರ -ಮೊ: 9945054333,
ಮಹೇಶ್ ಕುಮಾರ್ , ಎಸಿಪಿ ಕೇಂದ್ರ ಉಪವಿಭಾಗ, ಮಂಗಳೂರು ನಗರ – ಮೊ: 9480805320

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು