ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಮತ್ತೋರ್ವ ಆರೋಪಿಯನ್ನು ಬಂಧಿಸಿದೆ.
ಎನ್ಐಎ ಅಧಿಕಾರಿಗಳಿಂದ ಪಡೆದ ಅಧಿಕೃತ ಮಾಹಿತಿಯ ಪ್ರಕಾರ, ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ನಿವಾಸಿ ಶಾಹಿದ್ (40) ಎಂದು ಗುರುತಿಸಲಾಗಿದೆ. ಶಾಹಿದ್ ಅವರನ್ನು ಎಸ್ ಡಿಪಿಐ ಮುಖಂಡರಾದ ಶಫಿ ಬೆಳ್ಳಾರೆ ಮತ್ತು ಇಕ್ಬಾಲ್ ಬೆಳ್ಳಾರೆ ಅವರ ಸಹೋದರಿಯ ಪತಿ ಎಂದು ಹೇಳಲಾಗಿದೆ.
ಎನ್ಐಎ ಅಧಿಕಾರಿಗಳು ಆರೋಪಿಯನ್ನು ಬಂಧಿಸಿ ಬೆಂಗಳೂರಿಗೆ ಕರೆದೊಯ್ದಿದ್ದಾರೆ.