News Karnataka Kannada
Monday, May 06 2024
ಮಂಗಳೂರು

ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ, ವಿದೇಶದಲ್ಲಿ ಅಡಗಿರುವ ಆರೋಪಿಗಳ ಸುಳಿವು ಪತ್ತೆ

Mangaluru: Praveen Nettaru murder case: Clues of accused hiding abroad unearthed
Photo Credit : News Kannada

ಮಂಗಳೂರು: ಪ್ರವೀಣ್ ನೆಟ್ಟಾರು ಹಂತಕರಿಗೆ ನೆರವು ನೀಡಿದ ಆರೋಪಿಗಳು ವಿದೇಶದಲ್ಲಿ ಅಡಗಿರುವ ಬಗ್ಗೆ ಎನ್‌ಐಎಗೆ ಸುಳಿವು ದೊರೆತಿದ್ದು, ಇಬ್ಬರನ್ನು ವಶಕ್ಕೆ ಪಡೆದು ಭಾರತಕ್ಕೆ ಕರೆ ತರುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಯುತ್ತಿದೆ ಎನ್ನುವ ಮಾಹಿತಿ ಲಭಿಸಿದೆ.

ನಿಷೇಧಿತ ಪಿಎಫ್‌ಐ ಸದಸ್ಯರಾಗಿರುವ ಮೊಹಮ್ಮದ್ ಮುಸ್ತಫಾ ಎಸ್., ತುಫೈಲ್ಎಂ.ಎಚ್. ಪತ್ತೆಗೆ ತಲಾ 5 ಲಕ್ಷ ರೂ. ಹಾಗೂ ಉಮ್ಮರ್ ಫಾರೂಕ್, ಅಬೂಬಕ್ಕರ್ ಸಿದ್ದೀಕ್ ಪತ್ತೆಗೆ ತಲಾ 2 ಲಕ್ಷ ರೂ. ನಗದು ಬಹುಮಾನ ಘೋಷಿಸಲಾಗಿದೆ. ಶರೀಫ್ ಹಾಗೂ ಕೆ.ಎ.ಮಸೂದ್ ಪತ್ತೆಗೆ ತಲಾ 10 ಲಕ್ಷ ರೂ. ಘೋಷಿಸಲಾಗಿತ್ತು.

6 ಮಂದಿಯ ಪೈಕಿ ಐವರನ್ನು ಈಗಾಗಲೇ ಎನ್‌ಐಎ ತನ್ನ ವಶಕ್ಕೆ ಪಡೆದಿದೆ ಎನ್ನುವ ಮಾಹಿತಿ ಲಭಿಸಿದೆ. ಈ ಆರೋಪಿಗಳ ಪತ್ತೆ ದೇಶದೊಳಗೆಯೇ ಅಥವಾ ವಿದೇಶದಲ್ಲಿಯೇ ಎನ್ನುವ ಖಚಿತ ಮಾಹಿತಿ ಲಭಿಸಿಲ್ಲ. ಇನ್ನು ಇಬ್ಬರು ಆರೋಪಿಗಳಾದ ಶರೀಫ್ ಹಾಗೂ ಕೆ.ಎ. ಮಸೂದ್ ಸೌದಿಯಲ್ಲಿ ಅಡಗಿರುವ ಸುಳಿವು ಸಿಕ್ಕಿದ್ದು ಅವರ ಪತ್ತೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇನ್ನೋರ್ವ ಆರೋಪಿ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು