ಮಂಗಳೂರು: ಮಂಗಳೂರಿನ ಹಲವೆಡೆ ಮತ್ತೆ ಕೊಳೆತ ಮೊಟ್ಟೆ ಪೂರೈಕೆ ಮಾಡಲಾಗಿದೆ. ಪರಿಣಾಮ ಅಂಗನವಾಡಿಯಿಂದ ಮೊಟ್ಟೆ ಪಡೆದು ತಿಂದವರು ಅಸ್ವಸ್ಥರಾಗಿದ್ದಾರೆ.
ಮಂಗಳೂರಿನ ಕಾಟಿಪಳ್ಳ ಆಸುಪಾಸಿನಲ್ಲಿ ಗುತ್ತಿಗೆದಾರರು ಅಂಗನವಾಡಿಗಳಿಗೆ ಕೊಳೆತ ಮೊಟ್ಟೆ ಪೂರೈಕೆ ಮಾಡಿದ್ದಾರೆ. ಇನ್ನು ಆಕಾಶಭವನದಲ್ಲಿ ಗರ್ಭಿಣಿ ಮಹಿಳೆ, ಮಗು ಅಂಗನವಾಡಿ ಮಕ್ಕಳು ಮೊಟ್ಟೆ ತಿಂದು ಅಸ್ವಸ್ಥರಾಗಿದ್ದಾರೆ. ಕಳೆದ ತಿಂಗಳು ಮಂಗಳೂರಿನ ಹಲವೆಡೆ ಕೊಳೆತ ಮೊಟ್ಟೆ ಪೂರೈಕೆಯಾಗಿತ್ತು. ಈ ಬಾರಿಯೂ ಕೆಲವು ಕಡೆ ಕೊಳೆತ ಮೊಟ್ಟೆ ಪೂರೈಕೆ ಆಗಿರುವ ಬಗ್ಗೆ ತಿಳಿದು ಬಂದಿದೆ.