News Karnataka Kannada
Saturday, May 04 2024
ಮಂಗಳೂರು

ಮಂಗಳೂರು: ಬಾವಿಗೆ ಬಿದ್ದಿದ್ದ ಹೆಬ್ಬಾವುಗಳ ರಕ್ಷಣೆ

Mangaluru: Pythons trapped in an abandoned well rescued
Photo Credit : News Kannada

ಮಂಗಳೂರು: ಮಂಗಳೂರು ನಗರದ ಕೊಟ್ಟಾರದ ಪೃಥ್ವಿ ಅಪಾರ್ಟ್‌ಮೆಂಟ್ ಬಳಿಯ ಪಾಳು ಬಾವಿಗೆ ಬಿದ್ದಿದ್ದ ನಾಲ್ಕು ಬೃಹತ್ ಗಾತ್ರದ ಹೆಬ್ಬಾವುಗಳನ್ನು ಪರಿಸರ ಪ್ರೇಮಿಗಳು ರಕ್ಷಿಸಿದ್ದಾರೆ.

ಪಾಳು ಬಾವಿಯಲ್ಲಿ ಹೆಬ್ಬಾವುಗಳು ಬಿದ್ದಿರುವ ವಿಚಾರ ಸ್ಥಳೀಯರೊಬ್ಬರ ಗಮನಕ್ಕೆ ಬಂದಿದೆ. ಅವರು ಈ ಬಗ್ಗೆ ಮಂಗಳೂರಿನ ಪರಿಸರ ಪ್ರೇಮಿ ಭುವನ್ ದೇವಾಡಿಗ ಗಮನಕ್ಕೆ ತಂದಿದ್ದಾರೆ.ತಕ್ಷಣ ಅವರು ಪರಿಸರ ಪ್ರೇಮಿ ಅಜಯ ಕುಲಾಲ್ ತಂಡದೊಂದಿಗೆ ರಾತ್ರೋರಾತ್ರಿ ಹೆಬ್ಬಾವುಗಳ ರಕ್ಷಣಾ ಕಾರ್ಯಾಚರಣೆಗೆ ಇಳಿದಿದ್ದಾರೆ.

ಏಣಿಯ ಸಹಾಯದಿಂದ ಬಾವಿಗಿಳಿದು ಜನರೇಟರ್‌ನಿಂದ ವಿದ್ಯುತ್ ಬೆಳಕಿನ ವ್ಯವಸ್ಥೆ ಮಾಡಿ ಈ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ಸುಮಾರು 8.50 ಅಡಿ ಉದ್ದವಿರುವ 25ಕೆಜಿಗಿಂತಲೂ ಹೆಚ್ಚು ಭಾರವಿರುವ ಈ ಹೆಬ್ಬಾವುಗಳನ್ನು ಭಾರೀ ಪ್ರಯಸಪಟ್ಟು ಪಾಳು ಬಾವಿಯಿಂದ ಭುವನ್ ದೇವಾಡಿಗ, ಅಜಯ್ ಕುಲಾಲ್ ಹಾಗೂ ತಂಡ ರಕ್ಷಿಸಿದೆ.

ಬಳಿಕ ಈ ಹೆಬ್ಬಾವುಗಳನ್ನು ನಗರದ ಹೊರವಲಯದಲ್ಲಿರುವ ಅರಣ್ಯಕ್ಕೆ ಕೊಂಡೊಯ್ದು ಬಿಡಲಾಗಿದೆ. ಉರಗ ಪ್ರೇಮಿಗಳ ಈ ಕಾರ್ಯ ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು