ಮಂಗಳೂರು: ಆಡಳಿತ ಯಂತ್ರವನ್ನು ದುರುಪಯೋಗಪಡಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಸರಕಾರಿ ಇಲಾಖೆ ಅಧಿಕಾರಿಗಳ ಮೂಲಕ ಒತ್ತಡ ತಂದು ಸರಕಾರಿ ಕಾರ್ಯಕ್ರಮವನ್ನು ಸಂಘದ ಕಾರ್ಯಕ್ರಮದಂತೆ ಮಾಡುತ್ತಿದೆ ಎಂದು ಮಾಜಿ ಸಚಿವ ಕಾಂಗ್ರೆಸ್ ನಾಯಕ ರಮಾನಾಥ್ ರೈ ಆರೋಪಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು ಕೆಲವು ಅಂಗನವಾಡಿ ಕಾರ್ಯಕರ್ತರು ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸಿಲ್ಲ ಎಂದು ಅವರನ್ನು ತಾರಾಟೆಗೆ ತೆಗೆದುಕೊಳ್ಳುವ ಕೆಲಸವನ್ನು ಮಾಡಿರುವುದು ನಮ್ಮ ಗಮನಕ್ಕೆ ಬಂದಿದೆ. ಶಾಲಾ ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ, ಇದು ಸರಿಯಲ್ಲ ಆದರೆ ಅವರನ್ನು ಗೌರವಿಸುದು ಬಿಟ್ಟು ಅವರನ್ನು ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸಿಲ್ಲ ಎನ್ನುವ ಕಾರಣಕ್ಕೆ ತರಾಟೆಗೆ ತೆಗೆದುಕೊಂಡಿದ್ದು ಸರಿಯಲ್ಲ ಎಂದರು.
ಇದಲ್ಲದೆ ಕನ್ನಡ ಶಾಲಾ ಮಕ್ಕಳ ಹಬ್ಬ ಎನ್ನುವ ಸರಕಾರಿ ಕಾರ್ಯಕ್ರಮವನ್ನು ಮಾಡಲಾಗಿದ್ದು ಬಿಜೆಪಿಯ ಕೇಶವ ಸಂವರ್ಧನ ಸಮಿತಿ ಸಹಯೋಗದೊಂದಿಗೆ ಮಾಡಿದ್ದಾರೆ ಆರ್ ಎಸ್ ಎಸ್ ನ ಸಂಘ ಹತ್ತಿರದಲ್ಲಿ ಈ ಕಾರ್ಯಕ್ರಮವನ್ನು ಇಟ್ಟುಕೊಂಡಿದ್ದಾರೆ .ಮಕ್ಕಳ ಪ್ರತಿಭಾ ಪ್ರದರ್ಶನ ಮಾಡಲು ಡಿಡಿಪಿಐ ಸುತ್ತೋಲೆ ಕಳುಹಿಸಿದ್ದಾರೆ.
ಈ ಕಾರ್ಯಕ್ರಮವನ್ನು ಸರಕಾರಿ ಶಾಲೆಯಲ್ಲಿ ಮಾತಾಡಬಹುದಾಗಿತ್ತಲ್ಲವೇ ಎಂದು ಪ್ರಶ್ನಿಸಿದರು ಇಲಾಖೆಯನ್ನು ಆಡಳಿತವನ್ನು ದುರುಪಯೋಗವನ್ನು ಮಾಡುವುದನ್ನು ನಾವು ಬಿಡಲಾರೆವು ಎಂದರು . ಸುದ್ದಿಗೋಷ್ಠಿಯಲ್ಲಿ ನಾಯಕರಾದ ಕೋಡಿ ಜಲಿಬ್ರಾಹಿಂ ಚಂದ್ರಪ್ರಕಾಶ್ ಶೆಟ್ಟಿ, ಮೊದಲಾದರಿದ್ದರು.