ಮಂಗಳೂರು: ‘ಗಲಭೆ ಪ್ರಕರಣಗಳ ಸೂತ್ರಧಾರರನ್ನು ಪತ್ತೆ ಹಚ್ಚಿ, ಅವರನ್ನು ಶಿಕ್ಷೆಗೆ ಒಳಪಡಿಸಿದರೆ ಗಲಭೆಗಳು ಸಂಪೂರ್ಣ ನಿಲ್ಲುತ್ತವೆ’ ಎಂದು ಕೆಪಿಸಿಸಿ ಉಪಾಧ್ಯಕ್ಷ ರಮಾನಾಥ ರೈ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗಲಭೆ ಪ್ರಕರಣಗಳ ಸೂತ್ರಧಾರರೇ ಕುಮ್ಮಕ್ಕುದಾರರೂ ಆಗಿದ್ದಾರೆ. ಎಡಿಜಿಪಿ ಅವರು ಸ್ವತಂತ್ರವಾಗಿ ತನಿಖೆ ನಡೆಸಿ, ಇಂತಹವರನ್ನು ಮಟ್ಟಹಾಕಬೇಕು’ ಎಂದರು.
ಹತ್ಯೆ ಪ್ರಕರಣಗಳ ಆರೋಪಿಗಳಲ್ಲಿ ಯಾರೂ ಕಾಂಗ್ರೆಸ್ ಕಾರ್ಯಕರ್ತರು ಇಲ್ಲ. ಇಂತಹ ಪ್ರಕರಣಗಳಲ್ಲಿ ಭಾಗಿಯಾಗಿರುವವರಲ್ಲಿ ಹೆಚ್ಚಿನವರು ರಾಜ್ಯ ಮತ್ತು ಕೇಂದ್ರದಲ್ಲಿ ಆಡಳಿತದಲ್ಲಿರುವ ಬಿಜೆಪಿ ಕಾರ್ಯಕರ್ತರು ಮತ್ತು ಎಸ್ಡಿಪಿಐ ಕಾರ್ಯಕರ್ತರು’ ಎಂದರು.