News Karnataka Kannada
Saturday, May 04 2024
ಮಂಗಳೂರು

ಮಂಗಳೂರು: “ಗಾಂಧಿ ಗ್ರಾಮ ಪುರಸ್ಕಾರ” ಯೋಜನೆಯನ್ನು ಪುನಃ ಮುಂದುವರಿಸಲು ಮನವಿ

Demand for amendment of certain rules of Gram Swaraj and Panchayati Raj
Photo Credit : News Kannada

ಮಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾದ ಮಂಜುನಾಥ ಭಂಡಾರಿಯವರು ಪರಿಷತ್ ಅಧಿವೇಶನದಲ್ಲಿ ಶೂನ್ಯವೇಳೆಯ ಪ್ರಶ್ನೆಯಾಗಿ “2019-20ನೇ ಸಾಲಿನಿಂದ ನಿಂತು ಹೋಗಿರುವ “ಗಾಂಧಿ ಗ್ರಾಮ ಪುರಸ್ಕಾರ” ಯೋಜನೆಯನ್ನು ಪುನಃ ಮುಂದುವರಿಸುವ ಕುರಿತಾಗಿ ಪ್ರಸ್ತಾಪಿಸಿದರು. ಬಳಿಕ ಈ ವಿಷಯವಾಗಿ ಮಾನ್ಯ ಮುಖ್ಯಮಂತ್ರಿಯವರಿಗೆ ಪತ್ರದ ಮುಖಾಂತರ ಮನವಿ ಮಾಡಿದರು.

ಶಾಸಕರ ಶೂನ್ಯ ವೇಳೆ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಯವರು ರಾಜ್ಯದ ಪಂಚಾಯತ್‌ರಾಜ್ ಸಂಸ್ಥೆಗಳ ಆಡಳಿತ ವ್ಯವಸ್ಥೆಯಲ್ಲಿ ಮತ್ತಷ್ಟು ಪಾರದರ್ಶಕತೆ, ಉತ್ತರದಾಯಿತ್ವ ಮತ್ತು ವೇಗವನ್ನು ಹೆಚ್ಚಿಸಲು ಪಂಚಾಯತ್‌ರಾಜ್ ಸಂಸ್ಥೆಗಳಿಗೆ ಹಲವಾರು ಪ್ರೋತ್ಸಾಹಕ ಕ್ರಮಗಳಲ್ಲಿ ಒಂದಾದ ಗಾಂಧಿ ಗ್ರಾಮ ಪುರಸ್ಕಾರ ನೀಡುವ ಯೋಜನೆಯನ್ನು 2013-14ರಲ್ಲಿ ಪ್ರಾರಂಭಿಸಲಾಗಿತ್ತು.

ರಾಜ್ಯದ ಪ್ರತೀ ತಾಲೂಕಿಗೆ ಒಂದು ಗ್ರಾಮ ಪಂಚಾಯತಿಯನ್ನು ಗುರುತಿಸುವ ಈ ಯೋಜನೆಯಲ್ಲಿ ಆಯ್ಕೆಯಾದ ಗ್ರಾಮ ಪಂಚಾಯತಿಗೆ 5ಲಕ್ಷ ರೂಪಾಯಿಗಳ ಪ್ರೋತ್ಸಾಹಕ ಅನುದಾನವನ್ನು ನೀಡಲಾಗುತ್ತಿದ್ದು ಕೋವಿಡ್-19 ಹಿನ್ನಲೆಯಲ್ಲಿ 2019-20ರಲ್ಲಿ ಗಾಂಧಿ ಗ್ರಾಮ ಪುರಸ್ಕಾರಕ್ಕಾಗಿ ಆಯ್ಕೆ ಮಾಡಿದ ಗ್ರಾಮ ಪಂಚಾಯತಿಗಳಿಗೆ ಅನುದಾನ ನೀಡಿರುವುದಿಲ್ಲ.

ಆರ್ಥಿಕ ವರ್ಷ 2020-21ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಗ್ರಾಮ ಪಂಚಾಯತಿಗಳನ್ನು ಆಯ್ಕೆ ಮಾಡುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ ಎಂದು ಮುಖ್ಯಮಂತ್ರಿಯವರು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು