ಮಂಗಳೂರು: ಮೀಟರ್ ಗೇಜ್ ಅವಧಿಯಲ್ಲಿ ಬೆಳಗ್ಗೆ ಸುಬ್ರಹ್ಮಣ್ಯದಿಂದ ಮಂಗಳೂರಿಗೆ ಹೋಗಿ ಸಂಜೆ ವಾಪಸ್ ಆಗುತ್ತಿದ್ದ ರೈಲನ್ನು ಪುನರಾರಂಭಿಸಬೇಕು ಎಂದು ಸುಬ್ರಹ್ಮಣ್ಯ ಹಾಗೂ ಸುತ್ತಮುತ್ತಲಿನ ಜನರು ಕಳೆದ 18 ವರ್ಷಗಳಿಂದ ಒತ್ತಾಯಿಸುತ್ತಿದ್ದಾರೆ. ಇನ್ನೂ ಈಡೇರಿಲ್ಲ.
ಈಗ ಬೇಡಿಕೆ ಹೆಚ್ಚಿದೆ. ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ಟ್ಯಾಗ್ ಮಾಡಿ ಜನರು ಪ್ರತಿನಿತ್ಯ ಟ್ವೀಟ್ ಮಾಡುತ್ತಿದ್ದಾರೆ.
ಇದಲ್ಲದೆ, ಅನೇಕ ಪ್ರಮುಖ ವ್ಯಕ್ತಿಗಳು ತಮ್ಮ ಬೆಂಬಲವನ್ನು ನೀಡುವ ಮೂಲಕ ಈಗಾಗಲೇ ಹೋರಾಟದಲ್ಲಿ ಸೇರಿಕೊಂಡಿದ್ದಾರೆ.