ಮಂಗಳೂರು: ನಗರ ಉತ್ತರ ಕ್ಷೇತ್ರದ ನೀರುಮಾರ್ಗ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಣೂರ್ ನಲ್ಲಿ 10 ಲಕ್ಷ ರೂ ವೆಚ್ಚದಲ್ಲಿ ಪ್ರಸಾದ್ ಮನೆ ಬಳಿ ರಸ್ತೆ ಅಭಿವೃದ್ಧಿ ಹಾಗೂ ಮಾಣೂರು ಕೆರೆ ಅನಿಲ್ ಮನೆ ಬಳಿ ರಸ್ತೆ ಅಭಿವೃದ್ಧಿಗೆ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ನೀರುಮಾರ್ಗ ಶಕ್ತಿ ಕೇಂದ್ರದ ಪ್ರಮುಖ್ ಸತೀಶ್ ಆಚಾರ್ಯ, ಬೂತ್ ಅಧ್ಯಕ್ಷರಾದ ಧೀರಜ್, ಬೂತ್ ಕಾರ್ಯದರ್ಶಿ ಮೋನಪ್ಪ, ಪಂಚಾಯತ್ ಸದಸ್ಯರಾದ ಪುಷ್ಪರಾಜ್, ಕಸ್ತೂರಿ, ಲಕ್ಷ್ಮೀ ನಾಯ್ಕ, ಪ್ರಮುಖರಾದ ಚೇತನ್ ನಟ್ಟಿಲ್, ಯಶ್ವಿನ್, ಕಾರ್ಯಕರ್ತರು, ನಾಗರಿಕರು ಉಪಸ್ಥಿತರಿದ್ದರು.