News Karnataka Kannada
Tuesday, April 30 2024
ಮಂಗಳೂರು

ಮಂಗಳೂರು: ಕುಳಾಯಿ ಬಳಿ 200 ಕೋಟಿ ರೂ. ವೆಚ್ಚದಲ್ಲಿ ಜೆಟ್ಟಿ, ಡಾ. ಭರತ್‌ ಶೆಟ್ಟಿ ಭರವಸೆ

Rs 200 crore seized near Kulai Jetty at a cost, Dr. Bharath Shetty promises
Photo Credit : News Kannada

ಮಂಗಳೂರು: ರಾಷ್ಟ್ರೀಯತೆ, ಅಭಿವೃದ್ಧಿ, ಹಿಂದುತ್ವದ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ. ಕಳೆದ ಐದು ವರ್ಷಗಳಲ್ಲಿ ಕ್ಷೇತ್ರದಲ್ಲಿ 2,250 ಕೋಟಿ ರೂ.ಗಳಿಗೂ ಅಧಿಕ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಮಂಗಳೂರು ನಗರ ಉತ್ತರ ಕ್ಷೇತ್ರದ ಅಭಿವೃದ್ಧಿ ಬಿಜೆಪಿ ಅಭ್ಯರ್ಥಿ ಡಾ. ಭರತ್‌ ಶೆಟ್ಟಿ ಹೇಳಿದರು.

ಚಿತ್ರಾಪುರ ದೇವಳ ಬಳಿ ಮೊಗವೀರ ಸಮುದಾಯ ಹಾಗೂ ಸ್ಥಳೀಯರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್‌ ಈ ಕ್ಷೇತ್ರದಲ್ಲಿ ಅಧಿಕಾರದಲ್ಲಿದ್ದಾಗ ಕೇವಲ 525 ಕೋಟಿ ರೂ. ಅನುದಾನ ತಂದಿತ್ತು. ಆದರೆ ಕ್ಷೇತ್ರ ಇದೀಗ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ನಾಯರ್‌ಕುದ್ರುವಿನಿಂದ ಪಣಂಬೂರುವರೆಗೆ 70 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಯಾಗುತ್ತಿದೆ. ಗಂಜಿಮಠದಲ್ಲಿ ಪ್ಲಾಸ್ಟಿಕ್‌ ಪಾರ್ಕ್‌ ಕಾಮಗಾರಿ ಆರಂಭಗೊಂಡಿದೆ. ಐಟಿ ಪಾರ್ಕ್‌ ನಿರ್ಮಾಣಕ್ಕೆ ಜಾಗ ಗುರುತಿಸಲಾಗಿದೆ. ಕುಡಿಯುವ ನೀರು, ಉದ್ಯೋಗ ಸೃಷ್ಟಿ ಆದ್ಯತೆ ನೀಡಲಾಗಿದ ಎಂದರು.

200 ಕೋಟಿ ರೂ. ವೆಚ್ಚದಲ್ಲಿ ಜೆಟ್ಟಿ: ಸುಮಾರು 200 ಕೋಟಿ ರೂ. ವೆಚ್ಚದಲ್ಲಿ ಕುಳಾಯಿ ಬಳಿ ಜೆಟ್ಟಿ ನಿರ್ಮಾಣ ಹಾಗೂ ಸ್ಥಳೀಯವಾಗಿ ಕಡಲ್ಕೊರೆತ ಆಗದಂತೆ ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗುಗತ್ತದೆ ಎಂದರು. ಮೀನು ಉತ್ಪನ್ನ ಸುಲಭವಾಗಿ ಸಾಗಿಸಲು ಕಾರಿಡಾರ್‌ ನಿರ್ಮಾಣ ಕನಸಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು