News Karnataka Kannada
Saturday, April 27 2024
ಮಂಗಳೂರು

ಮಂಗಳೂರು: 2250 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯ, ಶಾಸಕ ಭರತ್‌ ಶೆಟ್ಟಿ ಹೇಳಿಕೆ

Rs 2,250 crore Development work at a cost, says MLA Bharath Shetty
Photo Credit : News Kannada

ಮಂಗಳೂರು: ಉತ್ತರ ವಿಧಾನ ಸಭೆ ವ್ಯಾಪ್ತಿಯಲ್ಲಿ ಹಿಂದಿನ ಶಾಸಕರು 525 ಕೋಟಿ ರೂ. ಅಭಿವೃದ್ಧಿ ಕಾರ್ಯ ನಡೆಸಿದ್ದು, ನನಗೆ ಸಿಕ್ಕ ಅಲ್ಪ ಅವಧಿಯಲ್ಲಿ 2250 ಕೋಟಿ ರೂ. ಅಭಿವೃದ್ಧಿ ಕಾರ್ಯ ನಡೆಸಿದ್ದೇನೆ. ಅಭಿವೃದ್ಧಿಗಿಂತಲೂ ಹೆಚ್ಚಾಗಿ 6500 ಮಂದಿಗೆ ಹಲವು ವರ್ಷಗಳಿಂದ ಬಾಕಿಯಿದ್ದ ಹಕ್ಕು ಪತ್ರ ಒದಗಿಸಲು ಕ್ರಮ ಕೈಗೊಂಡಿದ್ದೇನೆ ಎಂದು ಶಾಸಕ ವೈ. ಭರತ್‌ ಶೆಟ್ಟಿ ಹೇಳಿದರು.

ಬಿಜೆಪಿ ಮಂಗಳೂರು ಉತ್ತರ ಶಕ್ತಿ ಕೇಂದ್ರ 1,2ರವತಿಯಿಂದ ಮಂಗಳವಾರ ಸುರತ್ಕಲ್‌ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು. ಕೋವಿಡ್‌ ಸಂದರ್ಭ ಎರಡು ವರ್ಷ ಉದ್ಯಮಿಗಳ ನೆರವಿನಿಂದ ಅಗತ್ಯವಿದ್ದವರಿಗೆ ಕಿಟ್‌ ನೀಡಲಾಗಿದೆ ಎಂದರು.

ಕಿಯೋನಿಕ್ಸ್‌ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಮಾತನಾಡಿ ಪ್ರಧಾನಿ ಮೋದಿ ನೇತೃತ್ವದಲ್ಲಿ ದೇಶ ಪರಿವರ್ತನೆಯತ್ತ ಸಾಗುತ್ತಿದೆ. ಗುಜರಾತ್‌ ವಿಧಾನಸಭೆ ಚುನಾವಣೆಯಲ್ಲಿ ಮುಸ್ಲಿಂ ಬಾಹುಳ್ಯದ 17 ಕ್ಷೇತ್ರಗಳ ಪೈಕಿ 12ರಲ್ಲಿ ಬಿಜೆಪಿ ಜಯಗಳಿಸಿದೆ. ತ್ರಿಪಲ್‌ ತಲಾಖ್‌ ವಿಚಾರದಲ್ಲಿ ಮುಸ್ಲಿಂ ಮಹಿಳೆಯರು ಬಿಜೆಪಿ ಮತ ಹಾಕಿರುವುದು ಈ ನಿಟ್ಟಿನಲ್ಲಿ ಖಚಿತವಾಗಿದೆ ಎಂದರು.

ಬಿಜೆಪಿಗೆ ಸೇರ್ಪಡೆಗೊಂಡ ಸತೀಶ್‌ ಸುವರ್ಣ ಅವರನ್ನು ಪಣಂಬೂರು ಅವರನ್ನು ಇದೇ ಸಂದರ್ಭ ಪಕ್ಷದ ಧ್ವಜ ನೀಡಿ ಸ್ವಾಗತಿಸಲಾಯಿತು.
ಬಿಜೆಪಿ ಉತ್ತರ ಮಂಡಲ ಅಧ್ಯಕ್ಷ ತಿಲಕ್‌ರಾಜ್‌ ಕೃಷ್ಣಾಪುರ ಪ್ರಸ್ತಾಪಿಸಿದರು. ಮೇಯರ್‌ ಜಯಾನಂದ ಅಂಚನ್‌, ಬಿಜೆಪಿ ಶಕ್ತಿ ಕೇಂದ್ರ 1ರ ಅಧ್ಯಕ್ಷ ಮಹೇಶ್‌ ಮೂರ್ತಿ ಸುರತ್ಕಲ್‌, ಶಕ್ತಿ ಕೇಂದ್ರ 2ರ ಅಧ್ಯಕ್ಷ ವಿಠಲ ಸಾಲ್ಯಾನ್‌ ಮೊದಲಾದವರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು