ಮಂಗಳೂರು: ಉತ್ತರ ವಿಧಾನ ಸಭೆ ವ್ಯಾಪ್ತಿಯಲ್ಲಿ ಹಿಂದಿನ ಶಾಸಕರು 525 ಕೋಟಿ ರೂ. ಅಭಿವೃದ್ಧಿ ಕಾರ್ಯ ನಡೆಸಿದ್ದು, ನನಗೆ ಸಿಕ್ಕ ಅಲ್ಪ ಅವಧಿಯಲ್ಲಿ 2250 ಕೋಟಿ ರೂ. ಅಭಿವೃದ್ಧಿ ಕಾರ್ಯ ನಡೆಸಿದ್ದೇನೆ. ಅಭಿವೃದ್ಧಿಗಿಂತಲೂ ಹೆಚ್ಚಾಗಿ 6500 ಮಂದಿಗೆ ಹಲವು ವರ್ಷಗಳಿಂದ ಬಾಕಿಯಿದ್ದ ಹಕ್ಕು ಪತ್ರ ಒದಗಿಸಲು ಕ್ರಮ ಕೈಗೊಂಡಿದ್ದೇನೆ ಎಂದು ಶಾಸಕ ವೈ. ಭರತ್ ಶೆಟ್ಟಿ ಹೇಳಿದರು.
ಬಿಜೆಪಿ ಮಂಗಳೂರು ಉತ್ತರ ಶಕ್ತಿ ಕೇಂದ್ರ 1,2ರವತಿಯಿಂದ ಮಂಗಳವಾರ ಸುರತ್ಕಲ್ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು. ಕೋವಿಡ್ ಸಂದರ್ಭ ಎರಡು ವರ್ಷ ಉದ್ಯಮಿಗಳ ನೆರವಿನಿಂದ ಅಗತ್ಯವಿದ್ದವರಿಗೆ ಕಿಟ್ ನೀಡಲಾಗಿದೆ ಎಂದರು.
ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಮಾತನಾಡಿ ಪ್ರಧಾನಿ ಮೋದಿ ನೇತೃತ್ವದಲ್ಲಿ ದೇಶ ಪರಿವರ್ತನೆಯತ್ತ ಸಾಗುತ್ತಿದೆ. ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಮುಸ್ಲಿಂ ಬಾಹುಳ್ಯದ 17 ಕ್ಷೇತ್ರಗಳ ಪೈಕಿ 12ರಲ್ಲಿ ಬಿಜೆಪಿ ಜಯಗಳಿಸಿದೆ. ತ್ರಿಪಲ್ ತಲಾಖ್ ವಿಚಾರದಲ್ಲಿ ಮುಸ್ಲಿಂ ಮಹಿಳೆಯರು ಬಿಜೆಪಿ ಮತ ಹಾಕಿರುವುದು ಈ ನಿಟ್ಟಿನಲ್ಲಿ ಖಚಿತವಾಗಿದೆ ಎಂದರು.
ಬಿಜೆಪಿಗೆ ಸೇರ್ಪಡೆಗೊಂಡ ಸತೀಶ್ ಸುವರ್ಣ ಅವರನ್ನು ಪಣಂಬೂರು ಅವರನ್ನು ಇದೇ ಸಂದರ್ಭ ಪಕ್ಷದ ಧ್ವಜ ನೀಡಿ ಸ್ವಾಗತಿಸಲಾಯಿತು.
ಬಿಜೆಪಿ ಉತ್ತರ ಮಂಡಲ ಅಧ್ಯಕ್ಷ ತಿಲಕ್ರಾಜ್ ಕೃಷ್ಣಾಪುರ ಪ್ರಸ್ತಾಪಿಸಿದರು. ಮೇಯರ್ ಜಯಾನಂದ ಅಂಚನ್, ಬಿಜೆಪಿ ಶಕ್ತಿ ಕೇಂದ್ರ 1ರ ಅಧ್ಯಕ್ಷ ಮಹೇಶ್ ಮೂರ್ತಿ ಸುರತ್ಕಲ್, ಶಕ್ತಿ ಕೇಂದ್ರ 2ರ ಅಧ್ಯಕ್ಷ ವಿಠಲ ಸಾಲ್ಯಾನ್ ಮೊದಲಾದವರಿದ್ದರು.
ಬಾಟಲಿಯಿಂದ ಹೊಡೆದು ಯುವಕನೋರ್ವನ ಕೊಲೆ ಮಾಡಿರುವ ಘಟನೆ ಮುಂಡರಗಿ ತಾಲೂಕಿನ ಕೆಎಚ್ಬಿ ಹೊಸ ಕಾಲೊನಿಯಲ್ಲಿ ನಡೆದಿದೆ.ಕೊಪ್ಪಳದ ಹೈದರ್ ತಾಂಡಾದ ನಿವಾಸಿ…
ಪಾಕಿಸ್ತಾನದಲ್ಲಿ ಭಯೋತ್ಪಾದಕ ದಾಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗ್ವಾದರ್ನಲ್ಲಿ ಉಗ್ರ ದಾಳಿ ನಡೆದಿದ್ದು 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಭಾರತದ 855 ಸಂಸ್ಥೆಗಳ 2,350 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಆಕರ್ಷಿಸಿದ ಒಂಬತ್ತನೇ ವಾರ್ಷಿಕ ಬೋಯಿಂಗ್ ರಾಷ್ಟ್ರೀಯ ಏರೋ ಮಾಡೆಲಿಂಗ್ ಸ್ಪರ್ಧೆಯಲ್ಲಿ…
ಸಾಮೂಹಿಕ ಅನಾರೋಗ್ಯದ ರಜೆ ತೆಗೆದುಕೊಂಡ ಏರ್ ಇಂಡಿಯಾದ 30 ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ. ಬುಧವಾರ (ಮೇ 9)ದಿಂದ ಸುಮಾರು 300 ಸಿಬ್ಬಂದಿ…
2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು…
ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಖಂಡಿಸಿ ಹಾಗೂ ಪ್ರಜ್ವಲ್ ರೇವಣ್ಣರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್…