Categories: ಮಂಗಳೂರು

ಮಂಗಳೂರು: 30 ಲಕ್ಷ ರೂ ವೆಚ್ಚದಲ್ಲಿ ಮಳೆನೀರ ಚರಂಡಿ ನಿರ್ಮಾಣಕ್ಕೆ ಚಾಲನೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಕಂಕನಾಡಿ ವಾರ್ಡಿನ ಪ್ರಗತಿನಗರ ಪರಿಸರದಲ್ಲಿ 30 ಲಕ್ಷ ರೂ ವೆಚ್ಚದಲ್ಲಿ ಚರಂಡಿ ನಿರ್ಮಾಣಕ್ಕೆ ಶಾಸಕ ಡಿ. ವೇದವ್ಯಾಸ ಕಾಮತ್‌ ಅವರ ನೇತೃತ್ವದಲ್ಲಿ ಇಂದು ಶಿಲಾನ್ಯಾಸ ನೆರವೇರಿತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಪ್ರಗತಿನಗರ ಅಸೋಸಿಯೇಶನ್‌ ಅಧ್ಯಕ್ಷರು ಕಾಮಗಾರಿಗೆ ಶಿಲಾನ್ಯಾಸ ಮಾಡಿದ್ದಾರೆ. ಮಳೆಗಾಲದಲ್ಲಿ ಇಲ್ಲಿನ ನಿವಾಸಿಗಳಿಗೆ ಯಾವುದೇ ತೊಂದರೆಯಾಗಬಾರದು. ನೀರು ಸರಾಗವಾಗಿ ಹರಿದುಹೋಗಬೇಕು. ಅದಕ್ಕಾಗಿ ಸುಸಜ್ಜಿತವಾದ ಮಳೆನೀರ ಚರಂಡಿಯ ಕಾಮಗಾರಿ ನಡೆಸಲಾಗುತ್ತಿದೆ ಎಂದು ಹೇಳಿದರು.

ಅಭಿವೃದ್ಧಿ ಕಾಮಗಾರಿಗಳಲ್ಲಿ ಯಾವುದೇ ತಾರತಮ್ಯವಿಲ್ಲ. ಮಂಗಳೂರು ನಗರಕ್ಕೆ ಎಲ್ಲ ಸೌಲಭ್ಯಗಳನ್ನು ಸರಕಾರ ಒದಗಿಸುತ್ತಿದೆ. 2023ರ ಅಂತ್ಯದೊಳಗೆ ಮಂಗಳೂರು ದೇಶದಲ್ಲೇ ಮಾದರಿ ನಗರವಾಗಿ ಅಭಿವೃದ್ಧಿ ಹೊಂದಬೇಕೆಂಬ ಗುರಿಯೊಂದಿಗೆ ಕೆಲಸ ಮಾಡುತ್ತಿದ್ದೇವೆ ಎಂದು ಶಾಸಕ ಕಾಮತ್ ನುಡಿದರು.

ಇದಲ್ಲದೆ, ಮಾ.5ಕ್ಕೆ ಸಂಜೆ 5:30 ಗಂಟೆಗೆ ನಗರದ ಕುದ್ಮುಲ್‌ ರಂಗರಾವ್‌ ಪುರಭವನದಲ್ಲಿ ಮಹತ್ವಾಕಾಂಕ್ಷೆಯ 500 ಕೋಟಿ ರೂ ವೆಚ್ಚದ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್‌ ಮತ್ತು ಸಚಿವ ಸುನಿಲ್‌ ಕುಮಾರ್ ನೇತೃತ್ವದಲ್ಲಿ ಶಿಲಾನ್ಯಾಸ ನೆರವೇರಲಿದೆ. ನೇತ್ರಾವತಿ ನದಿ ಪರಿಸರದಿಂದ ತೊಡಗಿ ಸುಲ್ತಾನ್‌ ಬತ್ತೇರಿ ವರೆಗೆ ಹಲವು ಕಾಮಗಾರಿಗಳು ಈ ಅನುದಾನದಲ್ಲಿ ನಡೆಯಲಿವೆ ಎಂದು ಶಾಸಕರು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.

ಪಾಲಿಕೆ ನಾಮನಿರ್ದೇಶಿತ‌ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಮುಖಂಡರಾದ ಕಿರಣ್ ರೈ ಬಜಾಲ್, ಮುಕುಂದ ನಾಯಕ್, ಜಯ ಬಜಾಲ್, ಸುಮತಿ, ಹರೀಶ್, ರಾಮ್ ಎಕ್ಕೂರು, ರವಿ ಕುತ್ತಾರ್, ಮನೀಷ್ ಚೌಟ, ಭರತ್ ರಾಜ್ ಶೆಟ್ಟಿ, ಕೃಷ್ಣ ಬಂಗೇರ, ಸುಕೇಶ್ ಅಳಪೆ, ರಾಜೇಶ್ ಎಕ್ಕೂರು, ಸುಜಾತ‌ ಕೊಟ್ಟಾರಿ, ವೀಣಾ ರೈ, ಯಶೋದಾ ಗಟ್ಟಿ, ಮಾನಸ‌ ರೈ, ವಿಜಯ, ಪೂರ್ಣಿಮಾ, ಹೇಮಪ್ರಕಾಶ್, ಆರತಿ ಆಳ್ವ, ಲಲಿತಾ ರಾವ್, ಲೋಕೇಶ್ ಕುತ್ತಡ್ಕ ಮುಂತಾದವರು ಉಪಸ್ಥಿತರಿದ್ದರು.

Ashika S

Recent Posts

ಮರಕ್ಕೆ ಕಾರು ಡಿಕ್ಕಿ: ನಾಲ್ವರು ಕಾನೂನು ವಿದ್ಯಾರ್ಥಿಗಳು ಮೃತ್ಯು

ಅತಿ ವೇಗವಾಗಿ ಬಂದ ಕಾರೊಂದು ಭಯಾನಕವಾಗಿ ಇನ್ನೊಂದು ಕಾರಿಗೆ ಡಿಕ್ಕಿಯಾಗಿ ಮತ್ತೆ ಮರಕ್ಕೆ ರಭಸದಿಂದ ಗುದ್ದಿದ್ದರಿಂದ ನಾಲ್ವರು ಕಾನೂನು ವಿದ್ಯಾರ್ಥಿಗಳು…

18 mins ago

ಸಮಸ್ಯೆಗಳ ಆಗರ: ಮೂಲಸೌಕರ್ಯಗಳ ಕೊರತೆಗೆ ಬೇಸತ್ತ ಸಾರ್ವಜನಿಕರು

ಪಟ್ಟಣದಲ್ಲಿ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಸ್ಥಳೀಯ ಆಡಳಿತದ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ಬೇಸರಗೊಂಡಿದ್ದಾರೆ. ಪಟ್ಟಣದಲ್ಲಿ ಒಟ್ಟು 27 ವಾರ್ಡ್‌ಗಳು…

28 mins ago

ನಾಳೆ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನೆ

ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಮೇ.19 ರಂದು ಭಾನುವಾರ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ ಸಾಯಿಬಾಬಾ…

30 mins ago

ಚಾಮರಾಜನಗರದಲ್ಲಿ ಮುಂದುವರೆದ ಮಳೆ ಆರ್ಭಟ: ವಾಹನ ಸವಾರರ ಪರದಾಟ

ಗಡಿಜಿಲ್ಲೆ ವರುಣಾರ್ಭಟ ಮುಂದುವರೆದಿದ್ದು ಶನಿವಾರ ಮಧ್ಯಾಹ್ನದ ಜಿಲ್ಲಾಕೇಂದ್ರದಲ್ಲಿ ಒಂದೂವರೆ ತಾಸು ಜೋರು ಮಳೆಯಾಯಿತು.

41 mins ago

ನ್ಯೂಯಾರ್ಕ್​ಗೆ ತೆರಳಲಿದೆ ಟೀಮ್ ಇಂಡಿಯಾದ ಮೊದಲ ಬ್ಯಾಚ್ : ಯಾವಾಗ?

ಮುಂದಿನ ತಿಂಗಳು ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯುವ ಟಿ20 ವಿಶ್ವಕಪ್​ಗಾಗಿ ಟೀಮ್​ ಇಂಡಿಯಾದ ಮೊದಲ ಬ್ಯಾಚ್​…

45 mins ago

ಖಾಸಗಿ ಕಾರ್ಯಕ್ರಮದಲ್ಲಿ ಸಖತ್ ಸ್ಟೆಪ್ ಹಾಕಿದ ಶಾಸಕ ಶರಣು ಸಲಗರ್‌

ಖಾಸಗಿ ಕಾರ್ಯಕ್ರಮದಲ್ಲಿ ಬಸವಕಲ್ಯಾಣ ಶಾಸಕ ಶರಣು ಸಲಗರ್‌ ಅವರು ಪತ್ನಿ ಹಾಗು ಮಕ್ಕಳೊಂದಿಗೆ ಹೆಜ್ಜೆ ಹಾಕಿದ್ದಾರೆ. ಶಾಸಕ ಶರಣು ಸಲಗರ್‌ರಿಂದ…

55 mins ago