News Karnataka Kannada
Monday, April 29 2024
ಮಂಗಳೂರು

 ಮಂಗಳೂರು: ಇಂದಿನಿಂದ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಆರಂಭ

Sabarimala Ayyappa darshan to begin from today
Photo Credit : Wikimedia

 ಮಂಗಳೂರು: ಕೊರೋನಾ ಅವಧಿ ಬಳಿಕ ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಾನಕ್ಕೆ ಭೇಟಿ ಕೊಡುವ ಭಕ್ತರ ಸಂಖ್ಯೆ ಕೊರೋನಾ ಪೂರ್ವ ಅವಧಿಗೆ ಸಮಾನವಾಗುತ್ತಿದೆ . ಮಂಗಳವಾರ ಶಬರಿಮಲೆಯಲ್ಲಿ ಧಾರ್ಮಿಕ ವಿಧಿಗಳು ಆರಂಭಗೊಂಡಿದ್ದು ಬುಧವಾರ ದೇವಸ್ಥಾನದ ಬಾಗಿಲು ತೆರೆಯಲಾಗುತ್ತಿದೆ.

ಕರಾವಳಿಯಾದ್ಯಂತ ಕಾರ್ತಿಕ ಮಾಸದ ಸಂಕ್ರಮಣದಂದು ಭಕ್ತರು ಮಾಲೆಯನ್ನು ಹಾಕುತ್ತಾರೆ ಡಿಸೆಂಬರ್ 27ರಂದು ಮಂಡಲ ಪೂಜೆ ನಡೆಯಲಿದ್ದು ಬಳಿಕ ಇನ್ನೊಂದು ವರ್ತಿಯಲ್ಲಿ ಮಕರ ಸಂಕ್ರಮಣ ದರ್ಶನಕ್ಕೆ ತೆರಳಲಾಗುತ್ತದೆ. ಡಿಸೆಂಬರ್ ಮೊದಲೆರಡು ವಾರಗಳಲ್ಲಿಯೂ ವಿವಿಧಡೆ ಶಿಬಿರಗಳ ಮೂಲಕ ಮಾಲೆ ಧರಿಸುತ್ತಾರೆ. ಈ ಸಂದರ್ಭ ಮಾಲೆಧಾರಿಗಳೆಲ್ಲದೆ ಮನೆ ಇತರ ಸದಸ್ಯರು ಸಸ್ಯಹಾರವನ್ನು ಸ್ವೀಕರಿಸುವುದರಿಂದ ಒಟ್ಟಾರೆ ತರಕಾರಿ ಹಣ್ಣುಗಳ ಬಳಕೆ ಜಾಸ್ತಿಯಾಗುತ್ತಿದೆ.

ಚೆಂಗನೂರಿನಿಂದ ನೀಲಕಲವರೆಗೆ 12 ಸ್ಪಾಟ್ ಬುಕಿಂಗ್ ಮಾಡುವ 12 ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ , 15 ಆಸನಗಳಿಗಿಂತ ಕಡಿಮೆ ಇರುವ ವಾಹನಗಳಿಗೆ ಪಂಬಾ ಹೋಗಲು ಅವಕಾಶವಿದೆ ,ಅದಕ್ಕಿಂತ ಹೆಚ್ಚಿನ ಆಸನ ಸಾಮರ್ಥ್ಯ ವಾಹನಗಳಿಗೆ ನಿಲಕಲ್ವರೆಗೆ ಮಾತ್ರ ಪ್ರವೇಶವಿದೆ. ಅಲ್ಲಿ ಭಕ್ತರು ಇಳಿದು ಸರಕಾರಿ ವಾಹನಗಳಲ್ಲಿ ತೆರಳಬೇಕು . ಈ ಬಾರಿ ನಿತ್ಯ ಒಂದು ಲಕ್ಷ ಭಕ್ತರಿಗೆ ದರ್ಶನ ಅವಕಾಶ ಸಿಗುವ ಸಾಧ್ಯತೆ ಇದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ 500ಕ್ಕೂ ಹೆಚ್ಚು ಉಡುಪಿ ಜಿಲ್ಲೆಯಲ್ಲಿ 300ಕ್ಕೂ ಹೆಚ್ಚು ಶಿಬಿರಗಳು ಆರಂಭವಾಗಲಿವೆ , ಡಿಸೆಂಬರ್ ನಲ್ಲಿ ಶಿಬಿರಗಳ ಸಂಖ್ಯೆ ಹೆಚ್ಚಾಗಬಹುದು ಶಬರಿಮಲೆ ಅಯ್ಯಪ್ಪ ಸೇವಾ ಸಮಾಜ ಸಂಘಟನೆ 18 ರಾಜ್ಯಗಳಲ್ಲಿ 4000ಕ್ಕೂ ಹೆಚ್ಚು ಕರ್ನಾಟಕ ರಾಜ್ಯದ 22 ಜಿಲ್ಲೆಗಳಲ್ಲಿ ಅಸ್ತಿತ್ವಕ್ಕೆ ಬಂದಿವೆ ಹರಿವಾರಸನಂ ಹಾಡು ರಚನೆಯಾಗಿ ೧೦೦ ವರುಷ ಹಿನ್ನಲೆಯಲ್ಲಿ ಎರಡು ಜಿಲ್ಲೆಗಳ ಮಟ್ಟದ ಕಾರ್ಯಕ್ರಮ ಡಿ.11 ರಂದು ಮಂಗಳೂರಿನಲ್ಲಿ ನಡೆಯಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು