News Karnataka Kannada
Friday, May 10 2024
ಮಂಗಳೂರು

ಮಂಗಳೂರು: ಬಿಜೆಪಿ ಹಿರಿಯ ಕಾರ್ಯಕರ್ತ ಸತೀಶ್ ಪ್ರಭು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

Mangaluru: Satish Prabhu joins Congress
Photo Credit : News Kannada

ಮಂಗಳೂರು: ಇಂದು ಭಾರತೀಯ ಜನತಾ ಪಾರ್ಟಿಯ ಹಿರಿಯ, ಅನುಭವಿ, ಆರ್ ಎಸ್ ಎಸ್ ಕಾರ್ಯಕರ್ತ,  ಮಂಗಳೂರು ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮುಕ್ತೇಸರ ಸತೀಶ್ ಪ್ರಭು ಅಧಿಕೃತವಾಗಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಈ ಸಂದರ್ಭ ಮಾತನಾಡಿದ ಸತೀಶ್ ಪ್ರಭು,  32 ವರ್ಷಗಳಿಂದ ಬಿಜೆಪಿಯಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ಜನಹಿತ ಕೆಲಸಕ್ಕಾಗಿ ಬಿಜೆಪಿಯನ್ನು ಆಯ್ಕೆ ಮಾಡಿಕೊಂಡಿದೆ. ಯಾವುದೇ ಅಧಿಕಾರಕ್ಕಾಗಿ ಪಕ್ಷದಲ್ಲಿ ಇರಲಿಲ್ಲ. ಇತ್ತೀಚಿನ ದಿನಗಳಲ್ಲಿ ಬಿಜೆಪಿಯಿಂದ ಜನಹಿತ ಕಾರ್ಯವು ಅಸಾಧ್ಯ ಎಂದು ಗೊತ್ತಾಗಿದ್ದರಿಂದ ಕಾಂಗ್ರೆಸ್ ಪಕ್ಷ ಸೇರುತ್ತಿದ್ದೇನೆ. ಈ ಸಂದರ್ಭದಲ್ಲಿ ಯಾವುದೇ ಪಕ್ಷವನ್ನು ದೂರಲು ಹೋಗುವುದಿಲ್ಲ ಎಂದರು.

ಶಾಲೆಗೆ ಹೋಗುವ ಮೊದಲೇ ಆರ್ ಎಸ್‌ ಎಸ್ ಶಾಖೆಗೆ ಹೋದವನು. ಚಿಕ್ಕ ಪ್ರಾಯದಿಂದಲೇ ಸ್ವಯಂ ಸೇವಕನಾಗಿದ್ದೆ. ಜನಹಿತ ಕೆಲಸ ಮಾಡುವ ವ್ಯಕ್ತಿಯ ಜೊತೆಗೆ ನಾನಿದ್ದೇನೆ. ಮೋದಿ ಅವರು ಮೊದಲ ಬಾರಿಗೆ ಮಂಗಳೂರಿಗೆ ಬಂದಿದ್ದಾಗ ನಾನು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಗಿದ್ದೆ. ನಮ್ಮ ಟೀಮ್ ಮೋದಿ ಅವರನ್ನು ಕರೆಸಿಕೊಂಡಿತ್ತು. ಜನಹಿತ ಮಾಡುವ ವ್ಯಕ್ತಿ ಯಾವುದೇ ಪಕ್ಷದಲ್ಲಿದ್ದರೂ ಅವರ ಪರವಾಗಿದ್ದೇನೆ. ಮೋದಿ ಅವರ ಬಗ್ಗೆ ನನ್ನ ತಕರಾರಿಲ್ಲ. ಅವರು ಕೊಟ್ಟ ಯೋಜನೆಗಳನ್ನು ಜನರಿಗೆ ತಲುಪಿಸಲು ಯೋಗ್ಯತೆ ಇರುವ, ಜನಪರ ಆಗಿರುವ ಮತ್ತು ಪ್ರಾಮಾಣಿಕ ವ್ಯಕ್ತಿ ಜನಪ್ರತಿನಿಧಿಯಾಗಬೇಕು ಎಂದು ನಾನು ಬಯಸುತ್ತೇನೆ ಎಂದರು.

ನಾನು ಜಾತಿವಾದಿ ಅಲ್ಲ. ಆದರೆ ಈ ಜಿಲ್ಲೆಯಲ್ಲಿ ಜಿಎಸ್ ಬಿ ಸಮುದಾಯದ ವ್ಯಕ್ತಿಗಳು ಕಾಂಗ್ರೆಸ್ ನಲ್ಲಿದ್ದು ಈ ಹಿಂದೆ ದೊಡ್ಡ ಸಾಧನೆ ಮಾಡಿದವರಿದ್ದಾರೆ. ಜನಹಿತ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಬೇಕು ಎಂಬುದಷ್ಟೇ ನನ್ನ ಉದ್ದೇಶ ಎಂದರು.

ಸತೀಶ್ ಪ್ರಭು ಅವರನ್ನು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್ ಕುಮಾರ್, ಪಕ್ಷದ ಮಂಗಳೂರು ದಕ್ಷಿಣ ಅಭ್ಯರ್ಥಿ ಜೆ.ಆರ್.ಲೋಬೊ, ಸಂತೋಷ್ ಶೆಟ್ಟಿ ಹೂಹಾರ ಹಾಕಿ ಸತೀಶ್ ಪ್ರಭು ಅವರನ್ನು ಸ್ವಾಗತಿಸಿದರು.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿ ವಹಾಬ್‌ ಕುದ್ರೋಳಿ, ಸರಳ ಸಜ್ಜನ ನಾಯಕ, ಸತತ ಹಲವಾರು ವರ್ಷಗಳಿಂದ ಪಕ್ಷಕ್ಕಾಗಿ ಯಾವುದೇ ಫಲಾಪೇಕ್ಷೆವಿಲ್ಲದೇ ಅಧಿಕಾರದ ಆಸೆ ಇಲ್ಲದೆ ಕೇವಲ ಪಕ್ಷ ಸಂಘಟನೆ ಮಾಡಿಕೊಂಡು, ಸ್ವಂತಕ್ಕೆ ಸ್ವಲ್ಪ ಸಮಾಜಕ್ಕೆ ಸರ್ವಸ್ವ ಎಂಬ ಧ್ಯೇಯದೊಂದಿಗೆ ಇಂದು ಸೇರ್ಪಡೆಗೊಂಡ ಸತೀಶ್ ಅಣ್ಣನವರ ಮುಂದಿನ ರಾಜಕೀಯ ಭವಿಷ್ಯ ಉಜ್ವಲವಾಗಲಿ ಹಾಗೂ ಇವರ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಆನೆ ಬಲ ಬಂದಂತೆ ಆಗಿದೆ   ಎಂದು ತಿಳಿಸಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು