ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು ಕಳೆದ 24 ತಾಸುಗಳಲ್ಲಿ ಅತಿ ಹೆಚ್ಚು ಮಳೆ ದಾಖಲಾಗಿದೆ. ಇದೇ ಹವಾಮಾನ ಪರಿಸ್ಥಿತಿಯು ಮುಂದುವರಿಯುವ ಸೂಚನೆ ಇದ್ದು ಜಿಲ್ಲೆಯಾದ್ಯಂತ ನಾಳೆ ರೆಡ್ ಅಲರ್ಟ್ ಘೋಷಣೆಯಾಗಿದೆ.
ಹೀಗಾಗಿ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢಶಾಲೆ,ಪದವಿಪೂರ್ವ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್, ಐಟಿಐ ಸೇರಿದಂತೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಶುಕ್ರವಾರ(ಜುಲೈ 8) ಹಾಗೂ ಶನಿವಾರ(ಜುಲೈ 9)ರಜೆ ಘೋಷಿಸಲಾಗಿದೆ.
ಪಕ್ಕದ ಜಿಲ್ಲೆಯಾದ ಉಡುಪಿಯಲ್ಲಿ ಸಹ 2 ದಿನಗಳ ರಜೆಯನ್ನು ಜಿಲ್ಲಾಧಿಕಾರಿಗಳು ಘೋಷಿಸಿದ್ದಾರೆ.
ಇನ್ನೂ ಕಾಸರಗೋಡು ಜಿಲ್ಲೆಯಾದ್ಯಂತ ಇದೇ ಪರಿಸ್ಥಿತಿ ಮುಂದುವರಿದಿದ್ದು ಶುಕ್ರವಾರ(ಜುಲೈ 8)ಒಂದು ದಿನದ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ಆದೇಶ ನೀಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಜಿಲ್ಲೆಯ ಆಯ್ದ ಎಂಟು ತಾಲೂಕಿನ ಶಾಲಾ ಕಾಲೇಜಿಗೆ ಶುಕ್ರವಾರ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.