News Karnataka Kannada
Wednesday, May 01 2024
ಮಂಗಳೂರು

ಮಂಗಳೂರು: ಎಸ್ ಡಿಪಿಐ ಉಳ್ಳಾಲ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ರಿಯಾಝ್ ಗೆ ಅದ್ದೂರಿ ಸ್ವಾಗತ

SDPI Ullal assembly constituency candidate Riyaz gets a grand welcome
Photo Credit : News Kannada

ಮಂಗಳೂರು: ಎಸ್ ಡಿಪಿಐ ಮಂಗಳೂರು(ಉಳ್ಳಾಲ) ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಣೆಯಾಗಿ ಉಳ್ಳಾಲಕ್ಕೆ ಮೊದಲ ಬಾರಿ ಎಂಟ್ರಿ ನೀಡಿದ ತಾಂಟ್ರೆ ಖ್ಯಾತಿಯ ರಿಯಾಝ್ ಫರಂಗಿಪೇಟೆಯನ್ನ ರ‍್ಯಾಲಿಯಲ್ಲಿ ಕರೆತರಲು ಪೊಲೀಸರು ಅವಕಾಶ ನೀಡದಿದ್ದರೂ ಪಕ್ಷದ ಕಾರ್ಯಕರ್ತರು ನೆಚ್ಚಿನ ಅಭ್ಯರ್ಥಿಗೆ ಅದ್ದೂರಿ ಸ್ವಾಗತ ನೀಡಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಮಂಗಳೂರು(ಉಳ್ಳಾಲ) ಕ್ಷೇತ್ರದ ಎಸ್ ಡಿಪಿಐ ಪಕ್ಷದ ಅಭ್ಯರ್ಥಿಯಾಗಿ ಘೋಷಣೆಯಾದ ರಿಯಾಝ್ ಫರಂಗಿಪೇಟೆ ಶುಕ್ರವಾರ ಮೊದಲ ಬಾರಿಗೆ ಉಳ್ಳಾಲಕ್ಕೆ ಆಗಮಿಸಿದ್ದು ಕಾರ್ಯಕರ್ತರು ಕಲ್ಲಾಪಿನಿಂದ ಉಳ್ಳಾಲದ ವರೆಗೆ ರಿಯಾಝ್ ಅವರನ್ನ ರ‍್ಯಾಲಿಯಲ್ಲಿ ಕರೆದೊಯ್ಯಲು ಯೋಜನೆ ರೂಪಿಸಿದ್ದರು. ಕೊನೆ ಕ್ಷಣದಲ್ಲಿ ಪೊಲೀಸ್ ಇಲಾಖೆ ರ‍್ಯಾಲಿಗೆ ಅನುಮತಿ ನಿರಾಕರಿಸಿದರೂ ಅಭ್ಯರ್ಥಿಗೆ ಎಸ್ ಡಿಪಿಐ ಕಾರ್ಯಕರ್ತರು ಉಳ್ಳಾಲದಲ್ಲಿ ಅದ್ಧೂರಿ ಸ್ವಾಗತ ನೀಡಿದ್ದಾರೆ.

ಉಳ್ಳಾಲದ ಅಬ್ಬಕ್ಕ ವೃತ್ತದಿಂದ ಕಾರ್ಯಕರ್ತರು ರಿಯಾಝ್ ಪರಂಗಿಪೇಟೆಯನ್ನ ಅದ್ಧೂರಿ ಸ್ವಾಗತ ಕೋರಿ ನಗರಸಭೆ ಕಚೇರಿ ಮುಂಭಾಗದ ಪಕ್ಷದ ಕಚೇರಿಗೆ ಬರಮಾಡಿಕೊಂಡರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು