ಮಂಗಳೂರು: ಎಸ್ ಡಿಪಿಐ ಮಂಗಳೂರು(ಉಳ್ಳಾಲ) ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಣೆಯಾಗಿ ಉಳ್ಳಾಲಕ್ಕೆ ಮೊದಲ ಬಾರಿ ಎಂಟ್ರಿ ನೀಡಿದ ತಾಂಟ್ರೆ ಖ್ಯಾತಿಯ ರಿಯಾಝ್ ಫರಂಗಿಪೇಟೆಯನ್ನ ರ್ಯಾಲಿಯಲ್ಲಿ ಕರೆತರಲು ಪೊಲೀಸರು ಅವಕಾಶ ನೀಡದಿದ್ದರೂ ಪಕ್ಷದ ಕಾರ್ಯಕರ್ತರು ನೆಚ್ಚಿನ ಅಭ್ಯರ್ಥಿಗೆ ಅದ್ದೂರಿ ಸ್ವಾಗತ ನೀಡಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಮಂಗಳೂರು(ಉಳ್ಳಾಲ) ಕ್ಷೇತ್ರದ ಎಸ್ ಡಿಪಿಐ ಪಕ್ಷದ ಅಭ್ಯರ್ಥಿಯಾಗಿ ಘೋಷಣೆಯಾದ ರಿಯಾಝ್ ಫರಂಗಿಪೇಟೆ ಶುಕ್ರವಾರ ಮೊದಲ ಬಾರಿಗೆ ಉಳ್ಳಾಲಕ್ಕೆ ಆಗಮಿಸಿದ್ದು ಕಾರ್ಯಕರ್ತರು ಕಲ್ಲಾಪಿನಿಂದ ಉಳ್ಳಾಲದ ವರೆಗೆ ರಿಯಾಝ್ ಅವರನ್ನ ರ್ಯಾಲಿಯಲ್ಲಿ ಕರೆದೊಯ್ಯಲು ಯೋಜನೆ ರೂಪಿಸಿದ್ದರು. ಕೊನೆ ಕ್ಷಣದಲ್ಲಿ ಪೊಲೀಸ್ ಇಲಾಖೆ ರ್ಯಾಲಿಗೆ ಅನುಮತಿ ನಿರಾಕರಿಸಿದರೂ ಅಭ್ಯರ್ಥಿಗೆ ಎಸ್ ಡಿಪಿಐ ಕಾರ್ಯಕರ್ತರು ಉಳ್ಳಾಲದಲ್ಲಿ ಅದ್ಧೂರಿ ಸ್ವಾಗತ ನೀಡಿದ್ದಾರೆ.
ಉಳ್ಳಾಲದ ಅಬ್ಬಕ್ಕ ವೃತ್ತದಿಂದ ಕಾರ್ಯಕರ್ತರು ರಿಯಾಝ್ ಪರಂಗಿಪೇಟೆಯನ್ನ ಅದ್ಧೂರಿ ಸ್ವಾಗತ ಕೋರಿ ನಗರಸಭೆ ಕಚೇರಿ ಮುಂಭಾಗದ ಪಕ್ಷದ ಕಚೇರಿಗೆ ಬರಮಾಡಿಕೊಂಡರು.