News Karnataka Kannada
Monday, April 29 2024
ಮಂಗಳೂರು

ಮಂಗಳೂರು: ಎಸ್ ಡಿಪಿಐ ಪಕ್ಷದ ಕಛೇರಿಗಳಿಗೆ ಸೀಲ್ ಹಾಕಿರುವುದು ಖಂಡನೀಯ- ಅಬೂಬಕ್ಕರ್ ಕುಳಾಯಿ

Mangaluru: SDPI's offices sealed is condemnable: Aboobacker Kulai
Photo Credit : Facebook

ಮಂಗಳೂರು: ದ.ಕ ಜಿಲ್ಲಾದ್ಯಂತ ಕಳೆದ ದಿನ(ಬುಧವಾರ) ಮತ್ತು ಇಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ ಡಿಪಿಐ) ಕಾರ್ಯ ನಿರ್ವಹಿಸುತ್ತಿರುವ ಕಛೇರಿಗಳಿಗೆ ಮತ್ತು ಮಾಹಿತಿ ‌ಮತ್ತು ಸೇವಾ ಕೇಂದ್ರಗಳಿಗೆ ಪೋಲೀಸ್ ಅಧಿಕಾರಿಗಳು ಪಕ್ಷದ ನಾಯಕರಿಗೆ ಮಾಹಿತಿ ನೀಡದೆ ಮಹಜರು ನಡೆಸಿ ಬೀಗ ಜಡಿದು ಸೀಲ್ ಹಾಕಲಾದ ಘಟನೆ ಖಂಡನೀಯ ಎಂದು ಎಸ್‌ಡಿಪಿಐ ದ.ಕ ಜಿಲ್ಲಾಧ್ಯಕ್ಷ ಅಬೂಬಕ್ಕರ್ ಕುಳಾಯಿ ಪ್ರಕಟಣೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು ಎಸ್ ಡಿಪಿಐ ಚುನಾವಣಾ ಆಯೋಗದಲ್ಲಿ ನೊಂದಣಿಯಾಗಿ ದೇಶಾದ್ಯಂತ ರಾಜಕೀಯ ಚಟುವಟಿಕೆಗಳನ್ನು ನಡೆಸುತ್ತಿರುವ ಒಂದು ರಾಜಕೀಯ ಪಕ್ಷವಾಗಿದೆ. ದೇಶದ ಹಲವಾರು ರಾಜ್ಯಗಳಲ್ಲಿ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಲ್ಲಿ ಬಹಳಷ್ಟು ಚುನಾಯಿತ ಜನ ಪ್ರತಿನಿಧಿಗಳು ಪಕ್ಷದಿಂದ ಆಯ್ಕೆಯಾಗಿರುತ್ತಾರೆ .

ನಮ್ಮ ಜಿಲ್ಲೆಯಲ್ಲೂ ಇನ್ನೂರಕ್ಕೂ ಹೆಚ್ಚು ಜನ ಪ್ರತಿನಿಧಿಗಳು ಎಸ್ ಡಿಪಿಐ ಪಕ್ಷದಿಂದ ಆಯ್ಕೆಯಾಗಿದ್ದಾರೆ ಆದ್ದರಿಂದ ನಮ್ಮ ರಾಜಕೀಯ ಚಟುವಟಿಕೆಗಳು ನಡೆಸಲು ಕಛೇರಿಯ ಅತ್ಯಗತ್ಯವಾಗಿದೆ ಹಾಗೂ ಪಕ್ಷದ ಕಾರ್ಯಕರ್ತರು ಸ್ಥಳೀಯ ಮಟ್ಟದಲ್ಲಿ ಉಚಿತವಾಗಿ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಸರಕಾರಿ ಸೌಲಭ್ಯಗಳನ್ನು ಒದಗಿಸುತ್ತಿರುವ ಮಾಹಿತಿ ಮತ್ತು ಸೇವಾಕೇಂದ್ರಗಳಿಗೆ ಪೊಲೀಸ್ ಇಲಾಖೆ ಬೀಗ ಜಡಿದಿದ್ದು ಇದರಿಂದಾಗಿ ಸಾರ್ವಜನಿಕ ಸೇವೆಗೆ ಸಮಸ್ಯೆ ಆಗಿದೆ.

ಇದೀಗ ವಿಧ್ಯಾರ್ಥಿ ವೇತನದ ಅರ್ಜಿಗಳನ್ನು ಸಲ್ಲಿಸುವ ಸಮಯವಾಗಿದ್ದು ದಿನಂಪ್ರತಿ ನೂರಾರು ಬಡ ವಿಧ್ಯಾರ್ಥಿಗಳು ಸೇವಾಕೇಂದ್ರಗಳಿಗೆ ಭೇಟಿ ನೀಡಿ ವಿಧ್ಯಾರ್ಥಿ ವೇತನ ಮತ್ತು ಇತರ ಶೈಕ್ಷಣಿಕ ಸೌಲಭ್ಯ ಗಳಿಗೆ ಸಂಬಂಧಿಸಿದ ಉಚಿತ ಮಾಹಿತಿ ಮತ್ತು ಸೇವೆಗಳನ್ನು ಪಡೆಯುತ್ತಿದ್ದಾರೆ. ಕೇಂದ್ರ ಸರಕಾರವು ಪಿಎಫ್ ಐ ಸಂಘಟನೆಗೆ ನಿಷೇಧ ಹೇರಿದ್ದು ಹೊರತು ಎಸ್‌ಡಿಪಿಐ ಗೆ ಅಲ್ಲ ಎಂಬ ಮಾಹಿತಿ ಇದ್ದರು ನಿಷೇಧ ಹೆಸರಿನಲ್ಲಿ ಹಲವು ಕಡೆಗಳಲ್ಲಿ ಅಧಿಕಾರಿಗಳು ಪೂರ್ವ ಗ್ರಹ ಪೀಡಿತರಾಗಿ ಎಸ್ ಡಿಪಿಐ ಕಛೇರಿ ಮತ್ತು ಸೇವಾಕೇಂದ್ರಗಳಿಗೆ ಬೀಗ ಜಡಿದಿರುವುದು ಬೇಜಾವ್ದಾರಿಯುತ ವರ್ತನೆಯಾಗಿದೆ.ಇದರ ವಿರುದ್ಧ ಪಕ್ಷವೂ ಕಾನೂನು ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದ್ದಾರೆ.

ಈ ಬಗ್ಗೆ ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಜಿಲ್ಲೆಯ ಚುನಾವಣಾಧಿಕಾರಿ ಜಿಲ್ಲಾಧಿಕಾರಿಯವರು ಪಕ್ಷದ ಕಛೇರಿಯನ್ನು ಹೇಗೆ ಸೀಲ್ ಮಡಿದ್ದೀರಿ ಎಂಬುದರ ಬಗ್ಗೆ ಸ್ಪಷ್ಟೀಕರಣ ನೀಡಬೇಕು ಅದೇರೀತಿ ಬೀಗ ಜಡಿದು ಸೀಲ್ ಮಾಡಲಾದ ಪಕ್ಷದ ಕಛೇರಿ ಮತ್ತು ಸೇವಾಕೇಂದ್ರಗಳನ್ನು ತೆರವು ಮಾಡಬೇಕು ಇಲ್ಲದಿದ್ದಲ್ಲಿ ಕಾನೂನು ಹೋರಾಟ ನಡೆಸಲಾಗುವುದೆಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು