ಮಂಗಳೂರು: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಸಂತ ಅಲೋಶಿಯಸ್ ಕಾಲೇಜು (ಸ್ವಾಯತ್ತ) ಮಂಗಳೂರು ಕರಾವಳಿ ವಿಕಿಮೀಡಿಯನ್ಸ್ ಯೂಸರ್ ಗ್ರೂಪ್, ಮಂಗಳೂರು ಸಿಐಎಸ್-ಎ2ಕೆ, ಬೆಂಗಳೂರು ಇವರ ಸಹಯೋಗದೊಂದಿಗೆ ಅರೆಭಾಷೆ ಪದಕೋಶ ಬಿಡುಗಡೆ ಕಾರ್ಯಕ್ರಮ ಆ.06 ರಂದು ಸಾನಿಧ್ಯ ಸಂತ ಅಲೋಶಿಯಸ್ ಕಾಲೇಜು (ಸ್ವಾಯತ್ತ) ಮಂಗಳೂರಿನಲ್ಲಿ ನಡೆಯಿತು.
ಈ ಸಭಾ ಕಾರ್ಯಕ್ರಮದ ಸಭಾಧ್ಯಕ್ಷರಾಗಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಶ್ರೀ ಲಕ್ಷ್ಮೀನಾರಾಯಣ ಕಜೆಗದ್ದೆ ವಹಿಸಿದ್ದರು.
ಪದಕೋಶದ ಬುಡುಗಡೆಯನ್ನು ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಉಪಕುಲಪತಿಗಳಾದ ಪ್ರೊ. ಬಿ.ಎ. ವಿವೇಕ ರೈ ಅವರು ನೆರವೇರಿಸಿದರು. ಅವರು ಮಾತನಾಡಿ, ಅರಭಾಷೆ ಅನ್ನೋ ಒಂದು ಸಣ್ಣ ಭಾಷೆನ ಬೆಳವಣಿಗೆಯ ದೃಷ್ಟಿಯಿಂದ ಅರೆಭಾಷೆ ಪದಕೋಶ ರಚನೆ ಇದೊಂದು ವಿಶೇಷವಾದ ಕೊಡುಗೆ ಎಂದು ನಾನು ಭಾವಿಸುತ್ತೇನೆ ಎಂದರು. ಇಂಥ ಸಣ್ಣ ಭಾಷೆಯನ್ನು ಉಳಿಸಿ ಮತ್ತು ಆಧುನಿಕ ಸಂದರ್ಭಕ್ಕೆ ಅನುಗುಣವಾಗಿ ಬೆಳೆಸಬೇಕು ಎಂದರು.
ಪದಕೋಶದ ಬಗ್ಗೆ ಮದ್ರಾಸ್ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ, ಪ್ರೊ. ಚೆ. ರಾಮಸ್ವಾಮಿ. ರೆ.ಫಾ. ಮೆಲ್ವಿನ್ ಜೋಸೆಫ್ ಮಾತನಾಡಿದರು. ಪಿಂಟೊ ಎಸ್ ಜೆ ಇವರಿಂದ ಆಶೀರ್ವಾದದ ಮಾತುಗಳು ಹಾಗೆಯೇ ಸಂತ ಅಲೋಸಿಯಸ್ ಕಾಲೇಜು (ಸ್ವಾಯತ್ತ) ಮಂಗಳೂರು ಪ್ರಾಂಶುಪಾಲರಾದ ರೆ. ಡಾ. ಪ್ರವೀಣ್ ಮಾರ್ಟಿಸ್ ಎಸ್ ಜೆ ಇವರು ಶುಭ ನುಡಿಗಳನ್ನಾಡಿದರು.
ಕಾರ್ಯಕ್ರಮದಲ್ಲಿ ಬೇರೆ ಬೇರೆ ಕಾಲೇಜಿನ ಉಪನ್ಯಾಸಕರು, ಗಣ್ಯರು ಹಾಗೆಯೇ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.