News Karnataka Kannada
Tuesday, April 30 2024
ಮಂಗಳೂರು

ಮಂಗಳೂರು: ಸೋಮೇಶ್ವರದಲ್ಲಿ ಶ್ರಾವಣ ಅಮಾವಾಸ್ಯೆ ಉತ್ಸವ

Mangaluru: Shravana Amavasya festival at Someshwara
Photo Credit :

ಮಂಗಳೂರು: ಶ್ರಾವಣ ಅಮಾವಾಸ್ಯೆ ಪ್ರಯುಕ್ತ ಪುರಾಣ ಪ್ರಸಿದ್ದ ಸೋಮೇಶ್ವರ ಶ್ರೀ ಸೋಮನಾಥ ದೇವಸ್ಥಾನದ ಬಳಿಯ ಕಡಲಲ್ಲಿ ಸಹಸ್ರಾರು ಮಂದಿ ಭಕ್ತರು ಪವಿತ್ರ ತೀರ್ಥ ಸ್ನಾನ ಮಾಡಿ ಪುನೀತರಾದರು.

ಸೋಮೇಶ್ವರದ ಸೋಮನಾಥ ದೇವಸ್ಥಾನದ ಸಾಂಪ್ರದಾಯಿಕ ಉತ್ಸವಗಳಲ್ಲಿ ಶ್ರಾವಣ ಅಮಾವಾಸ್ಯೆ ಪವಿತ್ರ ಸಮುದ್ರ ತೀರ್ಥಸ್ನಾನ ವು ಪ್ರಾಮುಖ್ಯತೆ ಪಡೆದಿದೆ . ಮಳೆಗಾಲದಲ್ಲಿ ಪ್ರಕ್ಷುಬ್ಧಗೊಳ್ಳುವ ಕಡಲು ಶ್ರಾವಣ ಮಾಸದಲ್ಲಿ ಶಾಂತಆಗುವುದರ ಜೊತೆಗೆ ಕಡಲ ನೀರಿನಲ್ಲಿ ಔಷಧೀಯ ಗುಣದ ಲವಣಾಂಶಗಳು ಸಮೃದ್ಧಿ . ಈ ನೀರಿನಲ್ಲಿ ಸ್ನಾನ ಮಾಡಿದರೆ ಚರ್ಮ ವ್ಯಾಧಿ ಮಾತ್ರವಲ್ಲದೆ ಇನ್ನಿತರ ಕಾಯಿಲೆಗಳು ದೂರವಾಗುತ್ತವೆ ಎಂಬ ನಂಬಿಕೆಯಿದೆ.

ಭಕ್ತರು ಶ್ರಾವಣ ಅಮವಾಸ್ಯೆಯಂದು ಸೋಮೇಶ್ವರದ ಸಮುದ್ರದಲ್ಲಿ ಪವಿತ್ರ ತೀರ್ಥ ಸ್ನಾನ ವೆಂಬ ಧಾರ್ಮಿಕ ನಂಬಿಕೆ ಮತ್ತು ವೈಜ್ಞಾನಿಕ ಅರಿವಿನಿಂದ ಸ್ನಾನಮಾಡಿ ಪುಣಿತರಾಗುತ್ತಾರೆ . ಭಕ್ತರು ವೀಳ್ಯ ತೆಂಗಿನ ಕಾಯಿಯನ್ನು ಸಮುದ್ರ ರಾಜನಿಗೆ ಅರ್ಪಿಸಿ ನಂತರ ಸಮುದ್ರ ಸ್ನಾನ ಮಾಡಿ ಕಡ್ಡಾಯ ಅಲ್ಲದಿದ್ದರೂ , ಸಮೀಪದ ಗದಾತೀರ್ಥ ಕೆರೆಯಲ್ಲಿ ಸ್ನಾನ ಮಾಡಿ ದೇವಸ್ಥಾನಕ್ಕೆ ತೆರಳುತ್ತಾರೆ , ಸಮುದ್ರದಲ್ಲಿ ತೀರ್ಥಸ್ನಾನ ಮಾಡುವ ಸಂದರ್ಭ ಯಾವುದೇ ಅನಾಹುತಗಳು ನಡೆಯದಂತೆ ನುರಿತ ಜೀವ ರಕ್ಷಕ ಸಿಬ್ಬಂದಿಗಳು ಕಣ್ಗಾವಲು ಇಟ್ಟಿದ್ದರು .ದೇವಸ್ಥಾನಕ್ಕೆ ತೆರಳಿದ ಭಕ್ತರು ಸೋಮನಾಥನಿಗೆ ತನಗೆ ಪ್ರಿಯವಾದ ಸೇವೆಗಳನ್ನು ಸಲ್ಲಿಸಿ ಕೃತಾರ್ಥರಾದರು.

ಶ್ರಾವಣ ಅಮವಾಸ್ಯೆಯಂದು ಸೋಮೇಶ್ವರ ಕ್ಷೇತ್ರದಲ್ಲಿ ಗೃಹ ಮತ್ತು ಕೃಷಿ ಬಳಕೆಯ ವಿವಿಧ ರೀತಿಯ ವ್ಯಾಪಾರ ಜೋರಾಗಿರುತ್ತದೆ . ಕೃಷಿ ಚಟುವಟಿಕೆ ಆರಂಭದ ಸಮಯವಾದುದರಿಂದ ಸಹಸ್ರಾರು ಮಂದಿ ಸೇರುವ ತೀರ್ಥಸ್ನಾನದ ಸಂದರ್ಭದಲ್ಲಿ ಹಿಂದಿನಿಂದಲೂ ಇಲ್ಲಿ ಕತ್ತಿ ಮಾರಾಟದ ಸಂಪ್ರದಾಯ ಬೆಳೆದುಬಂದಿದೆ ವಾರದ ಕೊನೆಯ ಶನಿವಾರ ಅಮವಾಸೆಯ ಬಂದ ಕಾರಣ ಸೋಮೇಶ್ವರದಲ್ಲಿ ತೀರ್ಥಸ್ನಾನ ಮಾಡಲು ಭಕ್ತರ ದಂಡು ಕೊಂಚ ವಿರಳವಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30359
ಶರಣ್‌ ರಾಜ್

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು