News Karnataka Kannada
Monday, April 29 2024
ಮಂಗಳೂರು

ಮಂಗಳೂರು: ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಅಗ್ನಿಪಥ್‌ ಯೋಜನೆ ವಿರುದ್ದ ಪ್ರತಿಭಟನೆ

Mangaluru: South Block Congress Committee to stage protest against Agneepath project
Photo Credit : News Kannada

ಮಂಗಳೂರು: ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ನಗರ ಹಾಗು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರ ಸರಕಾರದ ಅಗ್ನಿಪಥ್‌ ಯೋಜನೆ ವಿರುದ್ದ ಮಂಗಳೂರು ಮಿನಿ ವಿಧಾನ ಸೌಧದ ಮುಂಭಾಗ ಇಂದು ಬೆಳಿಗ್ಗೆ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ಮಾಜಿ ಶಾಸಕ ಜೆ ಆರ್ ಲೋಬೊ ನೇತೃತ್ವ ವಹಿಸಿದ್ದರು. ಈ ಸಂದರ್ಭ ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು ‘ಬಿಜೆಪಿ ದೇಶವಿರೋಧಿ ಬೀಜವನ್ನು ಬಿತ್ತಿದ್ದು, ಅಗ್ನಿಪಥ್‌ ಯೋಜನೆ ಮೂಲಕ ವಿಭಜನೆಯ ಯತ್ನ ಮಾಡಿದೆ. ಉದ್ಯೋಗಾವಕಾಶ ಇಲ್ಲ, ಆರ್ಥಿಕ ವ್ಯವಸ್ಥೆ ಕುಸಿಯುತ್ತಿರುವ ಸಂದರ್ಭದಲ್ಲಿ ಸರಕಾರದ ಈ ಯೋಜನೆ ದೇಶವನ್ನು ಇನ್ನಷ್ಟು ಅಧಃಪತನಕ್ಕೆ ತಳ್ಳಲಿದೆ.

ದೇಶದಲ್ಲಿ ಉದ್ಯೋಗ ಸೃಷ್ಠಿಯಾಗುತ್ತಿಲ್ಲ, ಬಂಡವಾಳ ಹೂಡಿಕೆ ಆಗುತ್ತಿಲ್ಲ. ಇಂತಹ ಯೋಜನೆಯ ಮುಖಾಂತರ ವಿಷಬೀಜ ಬಿತ್ತುವ ಪ್ರಯತ್ನ ಆಗುತ್ತಿದೆ. ಯುವಕರಿಗೆ ಕೆಲಸ ಸೃಷ್ಠಿಯಾಗುವ ಕೆಲಸವನ್ನು ಬಿಜೆಪಿ ಸರ್ಕಾರ ಮಾಡಲಿ. ಇದಕ್ಕೆಲ್ಲ ಅಗ್ನಿಪಥ ಉತ್ತರವಲ್ಲ, ಇದೊಂದು ರಾಜಕೀಯ ಅಸ್ತ್ರ. ಇದನ್ನು ನಾನು ಖಂಡಿಸುತ್ತೇನೆ’ ಎಂದರು.

ಅಗ್ನಿಪಥ ರಾಜಕೀಯ ಪ್ರೇರಿತವಾದ ಬಿಜೆಪಿ ಅಸ್ತ್ರವಾಗಿದೆ. ದೇಶವನ್ನ ನಾಶ ಮಾಡುವ ಅಗ್ನಿಪಥ್‌ ಯೋಜನೆಯನ್ನು ಎಲ್ಲರೂ ವಿರೋಧಿಸಬೇಕು ಎಂದು ಕಿಡಿಕಾರಿದರು.

ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ, ಮಂಗಳೂರು ನಗರ ಪಾಲಿಕೆ ಸದಸ್ಯ ಶಶಿಧರ್ ಹೆಗ್ಡೆ, ಪ್ರವೀಣ್‌ಚಂದ್ರ ಆಳ್ವಾ, ಅಬ್ದುಲ್‌ ರವೂಫ್‌, ಅಬ್ದುಲ್ ಲತೀಫ್‌, ಮಾಜಿ ಸದಸ್ಯ ಪ್ರಕಾಶ್ ಸಾಲಿಯನ್, ಪದ್ಮನಾಭ ಅಮಿನ್, ಹಿಂದುಳಿದ ವರ್ಗದ ಜಿಲ್ಲಾಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್, ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು