ಮಂಗಳೂರು: ಕಾಂಗ್ರೆಸ್ ವಿಧಾನಸಭಾ ಚುನಾವಣೆ ಗಾಗಿ ಕಾಂಗ್ರೆಸ್ ಅಂತಿಮ ಪಟ್ಟಿಗೆ ಸಿದ್ಧತೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ವಕೀಲ, ಯುವ ಬಿಲ್ಲವ ಮುಖಂಡ ಪದ್ಮರಾಜ್ ಅವರನ್ನು ತುರ್ತಾಗಿ ದೆಹಲಿಗೆ ಬರುವಂತೆ ಹೈಕಮಾಂಡ್ ಸೂಚಿಸಿದೆ.
ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕೈ ಟಿಕೇಟ್ ಗಾಗಿ ಮಾಜಿ ಶಾಸಕ ಜೆ.ಆರ್ ಲೋಬೊ, ಹಿರಿಯ ಮುಖಂಡ ಐವನ್ ಡಿಸೋಜಾ ತೀವ್ರ ಪೈಪೋಟಿ ನಡೆಸಿದ್ದರು. ಈ ನಿಟ್ಟಿನಲ್ಲಿ ಹೈಕಮಾಂಡ್ ಅಳೆದು ತೂಗಿ ಪದ್ಮರಾಜ್ ಗೆ ಟಿಕೆಟ್ ಅಂತಿಮಗೊಳಿಸಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪದ್ಮರಾಜ್ ದೆಹಲಿ ಪ್ರಯಾಣ ಪ್ರಾಮುಖ್ಯತೆ ಪಡೆದಿದೆ.