Categories: ಮಂಗಳೂರು

ಮಂಗಳೂರು: ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ, ಲಕ್ಷತುಳಸೀ ಅರ್ಚನೆ

ಮಂಗಳೂರು: ಮಂಗಳೂರಿನ ಶಕ್ತಿನಗರದಲ್ಲಿರುವ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ದಿನಾಂಕ 18-08-2022 ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ದಿನಾಂಕ 19-8-2022ರಂದು ಶ್ರೀದೇವರಿಗೆ ಲಕ್ಷ ತುಳಸೀ ಅರ್ಚನೆ ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಶ್ರೀಕೃಷ್ಣ ಜನ್ಮಾಷ್ಟಮಿಯಂದು ಪ್ರಾತಃಕಾಲ ಶ್ರೀದೇವರಿಗೆ ಪಂಚಾಮೃತ ಅಭಿಷೇಕ, ಗಣಪತಿ ಹವನ, ಮಧ್ಯಾಹ್ನ ವಿಶೇಷ ಅಲಂಕಾರ ಪೂಜೆ,.ರಾತ್ರಿ ಶ್ರೀದೇವರಿಗೆ ಮಹಾ ಪೂಜೆ ಹಾಗೂ ಅರ್ಘ್ಯಪ್ರದಾನ ಸೇವೆ ನಡೆಯಲಿದೆ. ಆ ದಿನ ಪ್ರಾತಃಕಾಲದಿಂದ ವಿವಿಧ ಭಜನಾ ತಂಡಗಳಿಂದ ನಾಮ ಸಂಕೀರ್ತನೆ 9.30ರಿಂದ ಶ್ರೀ ನಾಗಬ್ರಹ್ಮ ಯಕ್ಷಕಲಾ ಸಂಘ, ರಾಜೀವನಗರ,ಶಕ್ತಿನಗರ ಇದರ ಕಲಾವಿದರಿಂದ ‘ಶ್ರೀ ಕೃಷ್ಣ ಲೀಲಾ ವರ್ಣವ’ ಎಂಬ ತಾಳಮದ್ದಳೆ ಪ್ರದರ್ಶನಗೊಳ್ಳಲಿದೆ.

ಸಂಜೆ 4.30 ರಿಂದ ಶಕ್ತಿ ವಸತಿ ಶಾಲೆ ಮತ್ತು ಪದವಿ ಪೂರ್ವಕಾಲೇಜಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ 5.00 ನಾಟ್ಯ ವಿಧುಷಿ ಶ್ರೀಮತಿ ವಿನುತಾ ಲಕ್ಷೀಕಾಂತ್ ಜೋಗಿ ಇವರ ಸಂಗೀತ-ನೃತ್ಯಾರಾಧನಾ ತಂಡದಿಂದ ಭರತನಾಟ್ಯ ಜರುಗಲಿದೆ 6.49ರಿಂದ ಕುಣಿತ ಭಜನೆ ನೆರವೇರಲಿದೆ. ರಾತ್ರಿ 11.30ಕ್ಕೆ ಶ್ರೀ ಗೋಪಾಲಕೃಷ್ಣ ದೇವರಿಗೆ ಅರ್ಘ್ಯಪ್ರದಾನ ನೆರವೇರಲಿದೆ. ವಿಶೇಷವಾಗಿ ಭಕ್ತಾದಿಗಳೆಲ್ಲರಿಗೂ ಶ್ರೀಕೃಷ್ಣನಿಗೆ ಅರ್ಘ್ಯಪ್ರದಾನ ಮಾಡಲು ಅವಕಾಶವಿದೆ.

ಮರುದಿನ 19-08-2022ರಂದು ಪ್ರಾತಃಕಾಲ ನಾಮಸಂಕೀರ್ತನೆ ಶ್ರೀದೇವರಿಗೆ ಪಂಚಾಮೃತಾಭಿಷೇಕ, ಬೆಳಗ್ಗಿನ ಪೂಜೆ ನಂತರ ಶ್ರೀಕೃಷ್ಣನಿಗೆ ಪ್ರಿಯವಾದ ಲಕ್ಷತುಳಸೀ ಅರ್ಚನೆ ಹಾಗೂ ವಿಶೇಷ ಮಹಾಪೂಜೆ, ನಡೆಯಲಿದೆ. ಲಕ್ಷತುಳಸೀ ಅರ್ಚನೆಗೆ ಅಗತ್ಯವಿರುವ ತುಳಸಿಯನ್ನು 18ರ ಪ್ರಾತಃಕಾಲಕ್ಕೆ ಮೊದಲಾಗಿ ದೇವಳಕ್ಕೆ ಅರ್ಪಿಸಬಹುದಾಗಿದೆ ಈ ಎಲ್ಲಾ ಕಾರ್ಯಕ್ರಮಕ್ಕೆ ಭಕ್ತಾದಿಗಳು ಬಂದು ಭಾಗವಹಿಸಿ ಶ್ರೀ ಗೋಪಾಲಕೃಷ್ಣ ದೇವರ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ವಿನಂತಿ.

ಈ ಪ್ರಯುಕ್ತ ಇಂದು ದೇವಸ್ಥಾನದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ, ಲಕ್ಷತುಳಸೀ ಅರ್ಚನೆ ಹಾಗೂ ಗಣೇಶ ಚತುರ್ಥಿಯಂದು ನಡೆಯಲಿರುವ 108 ನಾರೀಕೇಳ ಗಣಪತಿಹವನದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಪ್ರಸಿದ್ಧ ದೈವಜ್ಙರಾದ ಸಿ.ವಿ ಪೊದುವಾಳ್, ದೇವಸ್ಥಾನದ ಆಡಳಿತ ಮೋಕ್ತೇಸರರಾದ ಡಾ.ಕೆ.ಸಿ ನೈಕ್, ಶಕ್ತಿ ಶಿಕ್ಷಣ ಸಂಸ್ಥೆಗಳ ಪ್ರಧಾನ ಸಲಹೆಗಾರರಾದ ರಮೇಶ್, ದೇವಸ್ಥಾನದ ಆಡಳಿತಾದಿಕಾರಿ ಆದೀಶ್.ಕೆ ಹಾಗೂ ಭಕ್ತಾದಿಗಳು ಈ ಸಂದರ್ಭ ಉಪಸ್ಥಿತರಿದ್ದರು.

Gayathri SG

Recent Posts

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

11 mins ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

24 mins ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

36 mins ago

ಪೆನ್‌ಡ್ರೈವ್‌ ಕೇಸ್‌ : ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…

47 mins ago

ರೈತನ ಆರು ತಿಂಗಳ ಶ್ರಮ ಅರ್ಧಗಂಟೆಯಲ್ಲೇ ಹೋಮ

ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…

1 hour ago

ಬಾರ್ ಗೆ ನುಗ್ಗಿದ ಕಳ್ಳರು: 60 ಲೀಟರ್ ಮದ್ಯ ಕಳ್ಳತನ

ಜಿಲ್ಲೆಯ ಹನೂರು ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆಯಲ್ಲಿರುವ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ತಡ ರಾತ್ರಿ ಕಳ್ಳರ ತಂಡ…

2 hours ago