News Karnataka Kannada
Monday, May 20 2024
ಮಂಗಳೂರು

ಮಂಗಳೂರು: ಶ್ರೀಧರ ಹಂದೆಯವರಿಗೆ ಯಕ್ಷಧ್ರುವ ಕಲಾಗೌರವ

Mangaluru: Sridhar Hande to be honoured with yakshadhruva kala gaurav
Photo Credit : News Kannada

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ ಟ್ರಸ್ಟ್ ಇದರ ಅಮೇರಿಕಾ ಘಟಕದ ವಾರ್ಷಿಕ ಕಾರ್ಯಕ್ರಮ ಈ ಬಾರಿ ಪಾವಂಜೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ಸಭಾಂಗಣದಲ್ಲಿ ಜರಗಿತು. ಕಾರ್ಯಕ್ರಮವನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಪಟ್ಲ ಟ್ರಸ್ಟ್ ಯಕ್ಷಗಾನ ಕಲಾವಿದರಿಗಾಗಿ ಮಾಡುತ್ತಿರುವ ಸೇವೆಯ ಬಗ್ಗೆ ಮತ್ತು ಪಟ್ಲ ಸತೀಶ್ ಶೆಟ್ಟಿಯವರ ಕಾರ್ಯಯೋಜನೆಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ವಿಶ್ವವಿಖ್ಯಾತ ಸಾಲಿಗ್ರಾಮ ಮಕ್ಕಳ ಮೇಳದ ಸಂಸ್ಥಾಪಕ, ಬಡಗುತಿಟ್ಟಿನ ಹಿರಿಯ ಯಕ್ಷಗಾನ ವಿದ್ವಾಂಸಕರು, ಪ್ರಪ್ರಥಮ ಬಾರಿಗೆ ಸಾಲಿಗ್ರಾಮ ಮಕ್ಕಳ ಮೇಳವನ್ನು ಅಮೇರಿಕಾ ದೇಶಕ್ಕೆ ಪರಿಚಯಿಸಿದ ನಿವೃತ್ತ ಮುಖ್ಯೋಪಾಧ್ಯಾಯರೂ ಆಗಿರುವ ಹೆಚ್ ಶ್ರೀಧರ ಹಂದೆ ಕೋಟ ಇವರಿಗೆ ಯಕ್ಷಧ್ರುವ ಕಲಾ ಗೌರವವನ್ನು ಅಮೇರಿಕಾ ಘಟಕದ ವತಿಯಿಂದ ಅರ್ಪಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಮೇರಿಕಾ ಘಟಕದ ಅಧ್ಯಕ್ಷರಾದ ಡಾ. ಅರವಿಂದ ಉಪಾಧ್ಯಾಯರವರು ಕರಾವಳಿಯ ಗಂಡುಕಲೆ ಯಕ್ಷಗಾನ ಉಳಿಯಬೇಕಾದರೆ ಕಲಾವಿದರನ್ನು ಪ್ರೋತ್ಸಾಹಿಸುವುದರೊಂದಿಗೆ ಪ್ರಸ್ತುತ ಅವಧಿಯಲ್ಲಿ ಯಕ್ಷಗಾನದ ಮೂಲ ಸಂಪ್ರದಾಯ ಮತ್ತು ಪರಂಪರೆಯನ್ನು ಉಳಿಸಿಕೊಂಡು ಹೊಸತನವನ್ನು ತರುವಂತೆ ಪ್ರಯತ್ನಿಸಬೇಕು ಎಂದರು. ಪಟ್ಲ ಫೌಂಡೇಶನ್‌ನ ಈವರೆಗಿನ ಸಾಧನೆಗಳು ಪಟ್ಲಯಾನದಲ್ಲಿ ಗ್ರಂಥರೂಪದಲ್ಲಿ ಬಿಡುಗಡೆಯಾಗಿರುವುದಕ್ಕೆ ಸಂತೋಷ ವ್ಯಕ್ತಪಡಿಸಿ
ಅಮೇರಿಕಾದಲ್ಲಿ ಯಕ್ಷಗಾನ ಪ್ರಿಯರಿಗೆ ಇದನ್ನು ಪಿಡಿಎಫ್ ಮೂಲಕ ವಿತರಿಸಲಾಗುವುದೆಂದರು. ಕಲಾವಿದರಿಗೆ ವಿಮೆಯ ಕೊಡುಗೆಯನ್ನು ಅಮೇರಿಕಾ ಘಟಕದ ಮೂಲಕ ನೀಡಲು ಪ್ರಯತ್ನಿಸಲಾಗುವುದೆಂದರು.

ಕೇಂದ್ರೀಯ ಸಮಿತಿಯ ವತಿಯಿಂದ ಅಮೇರಿಕಾ ಘಟಕದ ಅಧ್ಯಕ್ಷರಾದ ಡಾ. ಅರವಿಂದ ಉಪಾಧ್ಯಾಯರನ್ನು ಗೌರವಿಸಲಾಯಿತು. ವೇದಿಕೆಯಲ್ಲಿ ಅಮೇರಿಕಾ ಘಟಕದ ಪ್ರಮುಖರು ಹಾಗೂ ಅಮೇರಿಕಾದ ಹ್ಯೂಸ್ಟನ್‌ನ ಬಯಲು ಪ್ರದೇಶದಲ್ಲಿ ಯಕ್ಷಗಾನವನ್ನು ಆಯೋಜಿಸಿದ್ದ ರೂವಾರಿ ವಾಸುದೇವ ಐತಾಳ, ಕಲ್ಕೂರ ಪ್ರತಿಷ್ಟಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಯಕ್ಷಗಾನ ವಿದ್ವಾಂಸರಾದ ಡಾ. ಎಂ. ಪ್ರಭಾಕರ ಜೋಶಿ, ಮಾರ್ಗದರ್ಶಕರುಗಳಾದ ಎಂ.ಎಲ್. ಸಾಮಗ, ಸುಧಾಕರ ಆಚಾರ್ಯ ಉಡುಪಿ, ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ, ಕೇಂದ್ರೀಯ ಸಮಿತಿಯ ಪದಾಧಿಕಾರಿಗಳಾದ ಸಿಎ ಸುದೇಶ್ ಕುಮಾರ್ ರೈ, ಡಾ.ಮನು ರಾವ್, ಪ್ರದೀಪ್ ಆಳ್ವ ಕದ್ರಿ, ರವಿ ಶೆಟ್ಟಿ ಅಶೋಕನಗರ ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು. ಕೊನೆಯಲ್ಲಿ ಅಮೇರಿಕಾದ ಯಕ್ಷಗಾನ ಪ್ರಿಯರಿಗೆ ಆಮೇರಿಕಾ ಘಟಕದ ವತಿಯಿಂದ ತೆಂಕುಬಡಗಿನ ಆಯ್ದ ಕಲಾವಿದರ ಕೂಡುವಿಕೆಯಿಂದ ಮಾಯಾ ತಿಲೋತ್ತಮೆ ಪ್ರಸಂಗವನ್ನು ಆನ್‌ಲೈನ್ ಯಕ್ಷಗಾನ ಬಯಲಾಟ ರೂಪದಲ್ಲಿ ಆಡಿ ತೋರಿಸಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು