ಮಂಗಳೂರು, ಡಿ.31: ಹೊಸ ವರ್ಷಾಚರಣೆಯ ಸಂಧರ್ಭದಲ್ಲಿ ಮಂಗಳೂರು ನಗರದಾದ್ಯಂತ ಕಟ್ಟುನಿಟ್ಟಿನ ನಿಯಮ ಜಾರಿ ಮಾಡಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಹೇಳಿದ್ದಾರೆ.
ಅವರು ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಜಿಲ್ಲಾಧಿಕಾರಿಗಳ ಸಭೆಯಂತೆ ನಿಯಮಾವಳಿ ರೂಪಿಸಲಾಗಿದೆ. 12.30ಕ್ಕೆ ಕಾರ್ಯಕ್ರಮ ಮುಗಿಸಿ 10 ಗಂಟೆಗೆ ಧ್ವನಿ ವರ್ಧಕ ಬಂದ್ ಮಾಡಬೇಕು. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 32 ಚೆಕ್ ಪೋಸ್ಟ್ ಹಾಕಲಾಗಿದೆ. ಯಾವುದೇ ತೊಂದರೆ ಇಲ್ಲದೇ ಸಂಭ್ರಮಾಚರಣೆಗಳನ್ನು ಮಾಡಬೇಕು ಎಂದು ಹೇಳಿದ್ದಾರೆ.
ಬೀಚ್ ಅಥವಾ ಯಾವುದೇ ಜಾಗದಲ್ಲಿ ಸಂಭ್ರಮಾಚರಣೆ ಮಾಡಲು ಅನುಮತಿ ಪಡೆದು ಮಾಡಬೇಕು. ಅನುಮತಿ ಇಲ್ಲದೇ ಯಾವುದೇ ಆಚರಣೆಗೆ ಅವಕಾಶ ಇಲ್ಲ. ರಾತ್ರಿ 12.30ಗೆ ಎಲ್ಲವೂ ಕ್ಲೋಸ್ ಆಗುವಾಗ ಆ ಬಳಿಕ ಯಾರೂ ರಸ್ತೆಯಲ್ಲಿ ಇರಬಾರದು. ತ್ರಿಬಲ್ ರೈಡ್ ಅಥವಾ ಕುಡಿದು ವಾಹನ ಚಾಲನೆಗೆ ಅವಕಾಶ ಇಲ್ಲ ಎಂದು ಶಶಿಕುಮಾರ್ ತಿಳಿಸಿದ್ದಾರೆ.
ಸುರತ್ಕಲ್ ಭಾಗದ ಎಲ್ಲಾ ಹೊಟೇಲ್ ಬಾರ್ ಕ್ಲಬ್ ಮಾಲಕರನ್ನು ಕರೆದು ಮಾಹಿತಿ ನೀಡಲಾಗಿದೆ. ಮಧ್ಯರಾತ್ರಿಯ ಸಂಧರ್ಭದಲ್ಲಿ ಅನಾವಶ್ಯಕವಾಗಿ ತಿರುಗಾಡುವವರನ್ನು ವಶಕ್ಕೆ ವಶಕ್ಕೆ ಪಡೆಯುತ್ತೇವೆ. ಕಾನೂನಿನಡಿಯಲ್ಲಿ ಪ್ರಕರಣವನ್ನು ದಾಖಲಿಸುತ್ತೇವೆ. ಪೊಲೀಸರೂ ಹೊಸವರ್ಷಾಚರಣೆಯನ್ನು ಆಚರಿಸಬೇಕು ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಹೇಳಿದ್ದಾರೆ.