News Karnataka Kannada
Monday, April 29 2024
ಮಂಗಳೂರು

ಮಂಗಳೂರು: ಪರಿಶಿಷ್ಟ ಜಾತಿ, ಪಂಗಡದ ಫಲಾನುಭವಿಗಳಿಗೆ ಸಹಾಯಧನ ವಿತರಣೆ

Subsidy disbursed to scheduled caste and scheduled tribe beneficiaries
Photo Credit : News Kannada

ಮಂಗಳೂರು: ಮಹಾನಗರಪಾಲಿಕೆ ವ್ಯಾಪ್ತಿಯ  ಪರಿಶಿಷ್ಟ ಜಾತಿ, ಪಂಗಡದ 22 ಫಲಾನುಭವಿಗಳಿಗೆ ಮೇಯರ್ ಜಯಾನಂದ ಅಂಚನ್  ಅಧ್ಯಕ್ಷತೆಯಲ್ಲಿ ರೂ 8,47,518 ರೂ. ಮೊತ್ತದ ಚೆಕ್ಕನ್ನು ವಿತರಿಸಲಾಯಿತು.

ಪಾಲಿಕೆಯ ಮೇಯರ್ ರವರ ಕೊಠಡಿಯಲ್ಲಿ ಆಯೋಜಿಸಲಾದ ಈ ಕಾಯ೯ಕ್ರಮದಲ್ಲಿ ಶೇ 24.10 ಯೋಜನೆಯಡಿ ಬರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ ಮನೆ ದುರಸ್ತಿ, ಮನೆ ನಿಮಾ೯ಣ, ತಾಳಿಭಾಗ್ಯ ಮುಂತಾದ ಸವಲತ್ತು ಪಡೆಯಲು ಸಹಾಯಧನ, ಶೇ 7.25 ರ ನಿಧಿಯಡಿ ಹಿಂದುಳಿದ ವಗ೯ದ ಸುಮಾರು 4 ಮಂದಿಗೆ ಶಸ್ತ್ರಾ ಚಿಕಿತ್ಸ ವೆಚ್ಚ, ಶೌಚಾಲಯ ನಿಮಾ೯ಣ, ಮತ್ತು ಮನೆ ದುರಸ್ತಿ ಮೊತ್ತ,  ಶೇ 5 ರ ನಿಧಿಯಡಿ ಅಂಗವಿಕಲರಿಗೆ ಶ್ರವಣ ಸಲಕರಣೆ ಮುಂತಾದ ಸವಲತ್ತುಗಳನ್ನು ನೀಡಲಾಯಿತು.

ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿನ ಎಲ್ಲಾ ವಗ೯ದ ಸಾವ೯ಜನಿಕರಿಗೆ ಕ್ರೀಡಾ ಪ್ರೋತ್ಸಾಹ ಧನ ಹಾಗೂ ಸಂಸ್ಕೃತಿಕ ಕಾಯ೯ಕ್ರಮಕ್ಕೆ ಸಹಾಯಧನ  ಚೆಕ್ ಅನ್ನು ವಿತರಿಸಲಾಯಿತು. ಕಾಯ೯ಕ್ರಮದಲ್ಲಿ ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಹೇಮಲತಾ ಸಾಲ್ಯಾನ್, ಹಣಕಾಸು ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಕಿಶೋರ್ ಕೊಟ್ಟಾರಿ, ಲೆಕ್ಕ ಪತ್ರ ಸ್ಥಾಯಿ ಸಮಿತಿ ಅಧ್ಯಕ್ಷರಾದ ನಯನ ಕೋಟ್ಯಾನ್, ಪಟ್ಟಣಯೋಜನಾ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶಕಿಲ ಕಾವ ಮತ್ತು ಮುಖ್ಯ ಸಚೇತಕರಾದ ಪ್ರೇಮಾನಂದ ಶೆಟ್ಟಿ   ಹಾಗೂ ಮಹಾನಗರಪಾಲಿಕೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು