ಮಂಗಳೂರು: ಏ.19ರಂದು ಸಾಯಂಕಾಲ 3ಕ್ಕೆ ಜೆಡಿಎಸ್ ಪಕ್ಷದ ಪ್ರಣಾಳಿಕೆ ಬಿಡುಗಡೆ ನಡೆಯಲಿದೆ. ಇದೇ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ಮುಖಂಡರಿಂದ ಸುದ್ದಿಗೋಷ್ಠಿ ನಡೆಯಲಿದೆ.
ಜೆಡಿಎಸ್ ದ.ಕ .ಜಿಲ್ಲಾ ಅಧ್ಯಕ್ಷ ಜಾಕೆ ಮಾಧವ ಗೌಡ , ಮಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಸುಮತಿ ಎಸ್ ಹೆಗ್ಡೆ ಹಾಗೂ ಇನ್ನಿತರ ನಾಯಕರು ಭಾಗವಹಿಸಲಿದ್ದಾರೆ.
ಏ.20ರಂದು ಮಂಗಳೂರು ದಕ್ಷಿಣ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಡಾ. ಸುಮತಿ ಎಸ್ ಹೆಗ್ಡೆ ನಾಮಪತ್ರ ಸಲ್ಲಿಸಲಿದ್ದಾರೆ. ಈ ಸಂಧರ್ಭ ಸಾವಿರಾರು ಜನರು ಪಕ್ಷದ ಕಾರ್ಯಕರ್ತರು, ನಾಯಕರು, ಹಿತೈಷಿಗಳು, ಸುಮತಿ ಹೆಗ್ಡೆ ಅಭಿಮಾನಿಗಳ ಬಳಗ ಸದಸ್ಯರು ಹಾಗೂ ಬೆಂಬಲಿಗರು ಭಾಗವಹಿಸಲಿದ್ದಾರೆ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಪ್ರ. ಕಾರ್ಯದರ್ಶಿ ಅಲ್ತಾಫ್ ತುಂಬೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.