News Karnataka Kannada
Monday, May 13 2024
ಮಂಗಳೂರು

ಮಂಗಳೂರು: ಕೊನೆಗೂ ಬಂದ್ ಆಯ್ತು ಸುರತ್ಕಲ್ ಟೋಲ್ ಗೇಟ್, ಪಟಾಕಿ ಸಿಡಿಸಿ ಸಂಭ್ರಮಿಸಿದ ಹೋರಾಟ ಸಮಿತಿ

Mangaluru: Surathkal toll gate finally closed, fireworks burst, protest committee celebrates
Photo Credit : News Kannada

ಸುರತ್ಕಲ್: ಇಲ್ಲಿನ ಎನ್‌ಐಟಿಕೆ ಟೋಲ್ ಗೇಟ್ ನಲ್ಲಿ ನ.30ರಂದು ಮಧ್ಯರಾತ್ರಿಯಿಂದ ಟೋಲ್ ಶುಲ್ಕ ಸಂಗ್ರಹ ನಿಲ್ಲಿಸಿದ್ದು, ಇದು ಹೋರಾಟಕ್ಕೆ ಸಿಕ್ಕಿದ ಜಯ ಎಂದು ಹೋರಾಟ ಸಮಿತಿಯ ಮುಖಂಡರು ತಿಳಿಸಿದ್ದಾರೆ.

ಟೋಲ್ ಗೇಟ್‌ನಲ್ಲಿ ಟೋಲ್ ಸಂಗ್ರಹ ನಿಲ್ಲಿಸಿದ ಕ್ಷಣವೇ ಹೋರಾಟಗಾರರ ಸಂಭ್ರಮ ಮುಗಿಲು ಮುಟ್ಟಿತ್ತು. ಹೋರಾಟ ಸಮಿತಿಯ ಮುಖಂಡರು ಕೇಕ್ ಗಳನ್ನು ಕತ್ತರಿಸುವ ಮೂಲಕ ಸಂಭ್ರಮಾಚರಣೆಯನ್ನು ಆಚರಿಸಿದರು.

ಹೋರಾಟ ಸಮಿತಿಯ ಮುಖಂಡರು, ಕಾರ್ಯಕರ್ತರು ಹಾಗೂ ದ.ಕ. ಮತ್ತು ಉಡುಪಿ ಜಿಲ್ಲೆಯ ಸಮಾನ ಮನಸ್ಕ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.

ಸಂಭ್ರಮಾಚರಣೆಯ ವೇಳೆ ಹೋರಾಟ ಸಮಿತಿಗೆ‌ ಜಯಘೋಷಗಳನ್ನು ಕೂಗಿದರು. ಚಂಡೆಯ ವಾದನ, ಹಾಡುಗಳಿಗೆ ಕುಣಿದು ಕುಪ್ಪಳಿಸಿದ ಕಾರ್ಯಕರ್ತರು, ಟೋಲ್ ಗೇಟ್ ಬಳಿ ಹಾಕಲಾಗಿದ್ದ ಧರಣಿ‌ ಮಂಟಪದ ಬಳಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಜೊತೆಗೆ ಅವಿಭಜಿತ ದ.ಕ. ಜಿಲ್ಲೆಯ ಸಂಸದರು, ಶಾಸಕರಿಗೆ ದಿಕ್ಕಾರ ಕೂಗಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು