News Karnataka Kannada
Sunday, April 28 2024
ಮಂಗಳೂರು

ಮಂಗಳೂರು: ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಬೀದಿನಾಟಕ

SVEEP Committee organises a street play on voter awareness
Photo Credit : News Kannada

ಮಂಗಳೂರು: ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ದ.ಕ. ಜಿಲ್ಲಾ ಪಂಚಾಯಿತಿ, ತಾಲೂಕು ಸ್ವೀಪ್ ಸಮಿತಿ ವತಿಯಿಂದ ಪಟ್ಟಣದ ಬಸ್ ನಿಲ್ದಾಣದಲ್ಲಿ ಬೀದಿನಾಟಕ ಪ್ರದರ್ಶನ ಮತ್ತು ಜಾನಪದ ಗೀತೆಗಳ ಮೂಲಕ ಮತದಾನ ಕುರಿತು ಜಾಗೃತಿ ಮೂಡಿಸಲಾಯಿತು.

ಮತದಾನದ ಮಹತ್ವ, ಯಾವುದೇ ಆಮಿಷಗಳಿಗೆ ಬಲಿಯಾಗದೇ ಮತದಾನ ಮಾಡುವ ಬಗ್ಗೆ, ಮತದಾನ ಮಾಡುವ ಮುನ್ನ ಎಂತಹ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು, ಅಮಿಷಗಳನ್ನು ಕಂಡಲ್ಲಿ ಮತದಾರರು ಕೈಗೊಳ್ಳಬೇಕಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಅರಿವು ಮೂಡಿಸಲಾಯಿತು.

ಮಂಗಳೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾ ಅಧಿಕಾರಿ ಲೋಕೇಶ್, ಸೈಂಟ್ ಆಗ್ನೇಶ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿ ಡಾ. ಉದಯ ಕುಮಾರ್, ಸ್ವೀಪ್ ಅಧಿಕಾರಿಗಳಾದ ತೇಜಾಕ್ಷಿ ಮತ್ತು ಡೊಂಬಯ್ಯ ಇಡ್ಕಿದು ಉಪಸ್ಥಿತರಿದ್ದರು.

ಮಹಿಳಾ ಪ್ರಥಮ ದರ್ಜೆ ಕಾಲೇಜು ಬಲ್ಮಠ ಹಾಗೂ ಸೇಂಟ್ ಆಗ್ನೇಶ್ ವಿದ್ಯಾರ್ಥಿಗಳು ಬೀದಿನಾಟಕದ ಮೂಲಕ ಜಾಗೃತಿ ಮೂಡಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು