ಮಂಗಳೂರು: ನಗರದ ಮೋತಿಮಹಲ್ ಹೋಟೆಲಿನಲ್ಲಿ ನಡೆದ ಬ್ಯಾಂಕ್ ಆಫ್ ಬರೋಡ ಪ್ರವರ್ತಿತ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ.) ಮಂಗಳೂರು ಇದರ 31ನೇ ವಾರ್ಷಿಕ ಮಹಾಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರತಿಷ್ಠಾನದ ಅಧ್ಯಕ್ಷರು ಮತ್ತು ಬ್ಯಾಂಕ್ ಆಫ್ ಬರೋಡ ಮಂಗಳೂರು ವಲಯದ ಮುಖ್ಯಸ್ಥರಾದ ಶ್ರೀಮತಿ ಗಾಯತ್ರಿ ಆರ್, ನೆರೆದ ಪ್ರತಿಷ್ಠಾನದ ಎಲ್ಲಾ ಸದಸ್ಯರನ್ನು ಉದ್ದೇಶಿಸಿ ಗ್ರಾಮೀಣ ಬಾಗದ ಸರ್ವತೋಮುಖ ಅಭಿವೃದ್ಧಿಗೆ ಬ್ಯಾಂಕಿಂಗ್ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಕರೆ ನೀಡಿದರು.
ಬ್ಯಾಂಕ್ ಆಫ್ ಬರೋಡ ಮಂಗಳೂರು ವಲಯದ ಉಪಮಹಾಪ್ರಬಂದಕರಾದ ಶ್ರೀ ಗೋಪಾಲಕೃಷ್ಣ ಆರ್ ಪ್ರತಿಷ್ಠಾನದ ಬೆಳವಣಿಗೆಗೆ ಸಮಯೋಚಿತ ಸಲಹೆಗಳನ್ನು ನೀಡಿದರು.
ಕಾರ್ಯದರ್ಶಿ ಬಿ ರಾಜೇಂದ್ರ ರೈಯವರು ಪ್ರತಿಷ್ಠಾನದ ವಾರ್ಷಿಕ ವರದಿಯನ್ನು ವಾಚಿಸಿದರು. ಲೆಕ್ಕ ಪರಿಶೋಧಕರಾದ ದಯಶರಣ್ ಶೆಟ್ಟಿ ಲೆಕ್ಕ ಪತ್ರಗಳನ್ನು ಮಂಡಿಸಿದರು.
ಉಪಾಧ್ಯಕ್ಷ ಪ್ರೇಮನಾಥ್ ಆಳ್ವ ತಮ್ಮ ಅನುಭವಗಳನ್ನು ಹಂಚಿ ಮಾರ್ಗದರ್ಶನ ನೀಡಿದರು. ನೆರೆದ ಸದಸ್ಯರು ತಮ್ಮ ಅಮೂಲ್ಯವಾದ ಸಲಹೆ ಸೂಚನೆಗಳನ್ನು ನೀಡಿ ಬ್ಯಾಂಕ್ ಆಫ್ ಬರೋಡದ ಕಾರ್ಯವನ್ನು ಶ್ಲಾಘಿಸಿದರು. ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಸಚಿನ್ ಹೆಗ್ಡೆ ವಂದಿಸಿ ಸದಾಶಿವ ಆಚಾರಿ ನಿರೂಪಿಸಿದರು.